Breaking News

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು.:ಹೆಚ್. ಕೆ.ಪಾಟೀಲ್

Spread the love

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಕಾನೂನು ಸಚಿವ ಹೆಚ್. ಕೆ.ಪಾಟೀಲ್ ಎಚ್ಚರಿಕೆ ಕೊಟ್ಟಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಡೆದ ಸಂಸತ್ ಅಧಿವೇಶನದಲ್ಲಿ ಫಾರೆಸ್ಟ್ ಕ್ಲಿಯರೆನ್ಸ್ ಸಿಗಬಹುದೆಂಬ ಆಶಾವಾದ ನಮ್ಮದು ಆಗಿತ್ತು. ಆದರೆ ಕೇಂದ್ರ ಸರ್ಕಾರ ನಿರಾಶೆ ಮಾಡಿದೆ.‌ ಅದೇ ಚುನಾವಣೆಗಳು ಬಂದಾಗ ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಮಾತನಾಡುತ್ತಾರೆ. ಅದೇ ಮಹದಾಯಿ ಸಭೆ ವಿಚಾರ ಬಂದಾಗ ಮುಂದಕ್ಕೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಈ ರೀತಿಯಾಗಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದರು.

ಹೀಗಾಗಿ ಮುಂದಿನ ಎರಡು ತಿಂಗಳಲ್ಲಿ ಯೋಜನೆಗೆ ಫಾರೆಸ್ಟ್ ಕ್ಲಿಯರೆನ್ಸ್’ನ್ನು ಕೇಂದ್ರ ಸರ್ಕಾರ ನೀಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

 


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ