Breaking News

ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Spread the love

 

ಬೆಳಗಾವಿ : “ಗಾಂಧಿ ಭಾರತದ ಅಂಗವಾಗಿ ಜ.21ರಂದು ನಡೆಯಲಿರುವ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ತಯಾರಿ ನಡೆಯುತ್ತಿದ್ದು, ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಸರ್ಕಿಟ್ ಹೌಸ್, ಕಪಿಲೇಶ್ವರ ದೇವಾಲಯ ಹಾಗೂ ಫಿರೋಜ್ ಸೇಠ್ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

“ಜ.21ರ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಇಂದು ಮಧ್ಯಾಹ್ನ ಕಾರ್ಯಕ್ರಮಕ್ಕೆ ಬರುವವರ ವಾಹನ ನಿಲುಗಡೆ ಸ್ಥಳ ಪರಿಶೀಲನೆ ಮಾಡಲಿದ್ದೇನೆ. ಆಹಾರ ಸಮಿತಿ ಜವಾಬ್ದಾರಿ ಹೊತ್ತಿರುವ ಸಚಿವರಾದ ಕೆ.ಹೆಚ್. ಮುನಿಯಪ್ಪ, ವಸತಿ ಸಮಿತಿ ಮುಖ್ಯಸ್ಥರಾದ ಸುಧಾಕರ್ ಅವರು ಈಗಾಗಲೇ ಬೆಳಗಾವಿಗೆ ಆಗಮಿಸಿದ್ದು, ಸ್ವಾಗತ ಸಮಿತಿ ಮುಖ್ಯಸ್ಥರಾದ ಪರಮೇಶ್ವರ್ ಅವರು ಶೀಘ್ರದಲ್ಲೇ ಆಗಮಿಸಲಿದ್ದಾರೆ. ನಾವು ಯಾರಿಗೆಲ್ಲ ಜವಾಬ್ದಾರಿ ವಹಿಸಿದ್ದೇವೋ ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಜಿಲ್ಲಾ ಸಚಿವರು ಸಂಘಟನೆಯಲ್ಲಿ ತೊಡಗಿದ್ದಾರೆ” ಎಂದು ತಿಳಿಸಿದರು.

“21ರ ಬೆಳಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಬೆಳಗ್ಗೆ ಸುವರ್ಣಸೌಧದಲ್ಲಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದ್ದು, ನಂತರ ಔತಣಕೂಟ ಏರ್ಪಡಿಸಲಾಗಿದೆ. ಆನಂತರ ಸಮಾವೇಶ ನಡೆಯಲಿದೆ” ಎಂದು ಮಾಹಿತಿ ನೀಡಿದರು.

ಸಮಾವೇಶಕ್ಕೆ ಎಷ್ಟು ಜನ ಸೇರಲಿದ್ದಾರೆ ಎಂದು ಕೇಳಿದಾಗ, “ಸಮಾವೇಶಕ್ಕೆ ಸಾರ್ವಜನಿಕರಿಗೆ ಆಹ್ವಾನ ನೀಡಿದ್ದೇವೆ. ಯಾರು ಬೇಕಾದರೂ ಬರಬಹುದು. ಇಂತಿಷ್ಟೇ ಜನ ಬರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಈ ಸಮಾವೇಶ ಗಾಂಧೀಜಿ, ಅಂಬೇಡ್ಕರ್ ಹಾಗೂ ಸಂವಿಧಾನದ ವಿಚಾರ. ಹೀಗಾಗಿ ಇದು ಎಲ್ಲರ ಕಾರ್ಯಕ್ರಮ. ಬಿಜೆಪಿಯವರು ಹೊರತಾಗಿ ಈ ದೇಶ ಉಳಿಸಲು, ಸಂವಿಧಾನ ರಕ್ಷಿಸಲು, ಗಾಂಧಿಜಿ ಅವರ ಆಚಾರ ವಿಚಾರ ಪ್ರಚಾರ ಮಾಡುವ ಇಚ್ಛೆ ಇರುವ ಯಾರು ಬೇಕಾದರೂ ಸಮಾವೇಶಕ್ಕೆ ಆಗಮಿಸಬಹುದು” ಎಂದರು.


Spread the love

About Laxminews 24x7

Check Also

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Spread the loveಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ