Breaking News

ಅಂಜನಾದ್ರಿ ದೇಗುಲದ ಕಾಣಿಕೆಯ ಪೆಟ್ಟಿಗೆಯಲ್ಲಿ ರೂ. 61.64 ಲಕ್ಷ ಮೊತ್ತದ ನಗದು ಸಂಗ್ರಹವಾಗಿದೆ.

Spread the love

ಗಂಗಾವತಿ (ಕೊಪ್ಪಳ): ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಅಂಜನಾದ್ರಿ ದೇಗುಲದ ಕಾಣಿಕೆಯ ಪೆಟ್ಟಿಗೆಯಲ್ಲಿನ ಹುಂಡಿ ಎಣಿಕೆ ಕಾರ್ಯ ಸೋಮವಾರ ನಡೆದಿದ್ದು, ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ.

ಕಳೆದ ನವಂಬರ್​ನಲ್ಲಿ ನಡೆದ ಹುಂಡಿ ಎಣಿಕೆಯ ಸಂದರ್ಭದಲ್ಲಿ ಸಂಗ್ರಹವಾಗಿದ್ದ 36 ಲಕ್ಷ ರೂಪಾಯಿ ಇದುವರೆಗಿನ ದಾಖಲೆಯಾಗಿತ್ತು. ಆದರೆ ಈ ಬಾರಿ ಎಲ್ಲಾ ದಾಖಲೆ ಮುರಿದು ಬರೋಬ್ಬರಿ ಅರ್ಧ ಕೋಟಿ ಅಂದರೆ ರೂ. 61.64 ಲಕ್ಷ ಮೊತ್ತದ ನಗದು ಸಂಗ್ರಹವಾಗಿದೆ.

ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಹೆಚ್ ಪ್ರಕಾಶ್ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಹನ್ನೊಂದು ಗಂಟೆಗೆ ಆರಂಭವಾದ ಹುಂಡಿ ಎಣಿಕೆ ಕಾರ್ಯ ಸಂಜೆ ಏಳು ಗಂಟೆಗೆ ಮುಗಿಯಿತು. ಸತತ ಎಂಟು ಗಂಟೆಗೂ ಹೆಚ್ಚು ಕಾಲ ಕಂದಾಯ ಇಲಾಖೆ, ದೇಗುಲ ಸಮಿತಿ ಸಿಬ್ಬಂದಿ ಸೇರಿ ಸುಮಾರು 40ಕ್ಕೂ ಹೆಚ್ಚು ಸಿಬ್ಬಂದಿ ಹಣ ಎಣಿಕೆ ಮಾಡಿದರು.

ಹುಂಡಿ ಎಣಿಕೆಯ ಸಂದರ್ಭದಲ್ಲಿ ಅಮೆರಿಕದ ತಲಾ ಒಂದು ಡಾಲರ್ ಮೌಲ್ಯದ ಎರಡು ಡಾಲರ್, ಸೌದಿ ಅರೆಬಿಯಾದ ಐದು ರಿಯಾದ್, ನೇಪಾಳದ 20 ರೂಪಾಯಿ ಮುಖ ಬೆಲೆಯ ಎರಡು ಹಾಗೂ ಐದು ರೂಪಾಯಿ ಮುಖ ಬೆಲೆಯ ಐದು ನೋಟುಗಳು ಪತ್ತೆಯಾಗಿವೆ.ಹನುಮನ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹನುಮಮಾಲೆ ವಿಸರ್ಜನೆ, ಹೊಸ ವರ್ಷ, ಸಂಕ್ರಮಣದಂತಹ ವಿಶೇಷ ದಿನಗಳು ಸಾಲು ಸಾಲಾಗಿ ಬಂದ ಹಿನ್ನೆಲೆ ಹುಂಡಿ ಹಣದಲ್ಲಿ ಏರಿಕೆಯಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ