Breaking News

ಸಿದ್ಧಗಂಗಾ ಶ್ರೀ ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ: ಜಯಮೃತ್ಯುಂಜಯ ಸ್ವಾಮೀಜಿ

Spread the love

ದಾವಣಗೆರೆ, ಜನವರಿ 21: ಸಿದ್ಧಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿ (Shivakumara Swami) ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ ಎಂದು ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ರಾಷ್ಟ್ರಪತಿ ಗಾಂಧೀಜಿ, ಸರೋಜಿನಿ ನಾಯ್ಡು ಭಾರತದ ಕೋಗಿಲೆ ಎಂಬ ರೀತಿಯಲ್ಲಿ ಸಿದ್ಧಗಂಗಾ ಶ್ರೀ ರಾಷ್ಟ್ರೀಯ ಸಂತ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಲಿ ಎಂದಿದ್ದಾರೆ.ಸಿದ್ಧಗಂಗಾ ಶ್ರೀ ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ: ಜಯಮೃತ್ಯುಂಜಯ ಸ್ವಾಮೀಜಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಯಮೃತ್ಯುಂಜಯ ಸ್ವಾಮೀಜಿ, ನಡೆದಾಡುವ ದೇವರು, ಕಾಯಕ ಯೋಗಿ, ದೇಶದಲ್ಲಿ‌ ತ್ರಿವಿಧ ದಾಸೋಹಿ ಎಂದೇ ಸಿದ್ಧಗಂಗಾ ಶ್ರೀಗಳು ಪ್ರಸಿದ್ದಿ‌ ಪಡೆದವರು‌. ಇದೇ ಕಾರಣಕ್ಕೆ ಅವರನ್ನು ರಾಷ್ಟ್ರೀಯ ಸಂತ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ದ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ

ಇನ್ನು ಈ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಜಯಮೃತ್ಯುಂಜಯ ಸ್ವಾಮೀಜಿ, ಕರ್ನಾಟಕ ಇತಿಹಾಸದಲ್ಲೇ ಲಿಂಗಾಯತರ ಮೇಲೆ ಯಾರೂ ಕೂಡ ಹಲ್ಲೆ ಮಾಡಿರಲಿಲ್ಲ. ಲಿಂಗಾಯತರ‌ ಮೇಲೆ‌‌ ಮಾರಣಾಂತಿಕ ಹಲ್ಲೆ‌ ರಾಜ್ಯ ಸರ್ಕಾರ ಕಾರಣವಾಗಿದೆ. ನಮ್ಮ ಹೋರಾಟ ಹತ್ತಿಕ್ಕಲು ಉದ್ದೇಶಪೂರ್ವಕವಾಗಿ ಪೊಲೀಸರಿಂದ ಹಲ್ಲೆ ನಡೆಸಿದ್ದಾರೆ. ಇದುವರೆಗೂ ನಮಗೆ ಕ್ಷಮಾಪಣೆ ಕೇಳಿಲ್ಲ, ಹಲ್ಲೆ ಮಾಡಿದ ಅಧಿಕಾರಿಗಳ ಮೇಲೆ ಕ್ರಮವಾಗಿಲ್ಲ. ಮಾನವ ಹಕ್ಕು ಆಯೋಗಕ್ಕೂ ನಮ್ಮ ವಕೀಲರು ದೂರು ಸಲ್ಲಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಲಿಂಗಾಯತ ಹೋರಾಟವನ್ನು ಅಸಾಂವಿಧಾನಿಕ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲೇ ಹೇಳಿದ್ದಾರೆ. ಹೊಡೆದಿದ್ದು ಅಲ್ಲದೆ ಗಾಯದ ಮೇಲೆ ಬರೆ ಎಳೆದಂತೆ ಮಾತನಾಡಿದ್ದಾರೆ. ಮತ್ತೆ ಅವರ ಬಳಿ ಹೋಗಿ ಮೀಸಲಾತಿ ಬಗ್ಗೆ ನಾವು ಹೇಳೋದಿಲ್ಲ. ನಾನು ಪ್ರತಿಯೊಂದು ಹಳ್ಳಿಗೂ ಸಂಚಾರ ಮಾಡುತ್ತೇನೆ. ರಾಜ್ಯ ಸರ್ಕಾರ ಮಾಡಿದ ಅನ್ಯಾಯ ಬಗ್ಗೆ ಜನರಿಗೆ ತಿಳಿಸುತ್ತೇನೆ. ಲಾಠಿ, ಬೂಟು ಏಟು ಕೊಟ್ಟವರಿಗೆ ಏನು ಉತ್ತರ ಕೊಡುತ್ತೀರಿ. ಮೀಸಲಾತಿ ಕೊಡುತ್ತೇವೆ ಎನ್ನುವರಿಗೆ ಏನು ಉತ್ತರ ಕೊಡುತ್ತೀರಿ ಎಂದು ಅವರ ಮುಂದೆ ಇಡುತ್ತೇನೆ ಎಂದಿದ್ದಾರೆ.

224 ಕ್ಷೇತ್ರದ ಪ್ರತಿ ಹಳ್ಳಿಗೂ ಪ್ರತಿಜ್ಞಾ ಕ್ರಾಂತಿ ಅಭಿಯಾನ ಮಾಡುತ್ತೇನೆ. 20 ವರ್ಷ ಕಾಲ ಇವರೇ ಮುಖ್ಯಮಂತ್ರಿಯಾಗಿ ಇರೋದಿಲ್ಲ. ದೇವರ ದಯದಿಂದ ಮುಂದೆ ಬೇರೆ ಮುಖ್ಯಮಂತ್ರಿ ಬರ್ತಾರೆ ಅವರ ಮೂಲಕ ನ್ಯಾಯ ಕೇಳುತ್ತೇವೆ. ಜನರ ಮುಂದೆ ಹೋಗುತ್ತೇನೆ ದೌರ್ಜನ್ಯ ಮಾಡಿದವರಿಗೆ ಆಶೀರ್ವಾದ ಮಾಡುತ್ತಿರೋ, ಇಲ್ಲಾ ಸಮಾಜಕ್ಕೆ ‌ಪ್ರೀತಿ ಕೊಡುವವರಿಗೆ ಆಶೀರ್ವಾದ ಮಾಡುತ್ತಾರೋ ಅವರಿಗೆ ಬಿಡುತ್ತೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ