Breaking News

ದಂಪತಿ ಮನೆ ತೊರೆದ ವಿಚಾರ ತಿಳಿದು ಅವರ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಖದೀಮನೊಬ್ಬನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು : ಹೆಂಡತಿಯೊಂದಿಗೆ ಜಗಳವಾಡಿಕೊಂಡು ಊರಿಗೆ ಹೋಗಿದ್ದ ವ್ಯಕ್ತಿಯ ಮನೆ ದೋಚಿದ್ದ ಕಳ್ಳನನ್ನ ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡಿನ ವೆಲ್ಲೂರು ಮೂಲದ ಸತೀಶ್ ಬಂಧಿತ ಆರೋಪಿ.

ಆರೋಪಿ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಸುಮಾರು 16.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಮನೆ ತೊರೆದಾಗ ಕಳ್ಳನ ಕೈಚಳಕ: ಅಕ್ಕಸಾಲಿಗರಾಗಿದ್ದ ಮನೆ ಮಾಲೀಕ ಮನೆಯಲ್ಲಿ ಚಿನ್ನಾಭರಣಗಳ ತಯಾರಿ ಕೆಲಸ ಮಾಡಿಕೊಂಡಿದ್ದರು. ಜನವರಿ 1ರಂದು ಮನೆಯಲ್ಲಿದ್ದ ಮಾಲಿಕ ದಂಪತಿಯ ನಡುವೆ ಸಣ್ಣ ವಿಚಾರಕ್ಕೆ ಜಗಳವಾಗಿತ್ತು. ಈ ವೇಳೆ ಕೋಪಿಸಿಕೊಂಡಿದ್ದ ಪತ್ನಿ ತವರು ಮನೆಗೆ ಹೋಗಿದ್ದರು. ಇತ್ತ ಮನೆ ಮಾಲೀಕ ಸಹ ಪತ್ನಿಯ ಮೇಲಿನ ಸಿಟ್ಟಿನಿಂದ ಮಕ್ಕಳಿಬ್ಬರನ್ನೂ ಕರೆದುಕೊಂಡು ತಮ್ಮ ಸ್ವಂತ ಊರಾದ ಸಾಗರಕ್ಕೆ ತೆರಳಿದ್ದರು. ಮನೆಯಿಂದ ಬಸ್ ನಿಲ್ದಾಣದವರೆಗೆ ತೆರಳಲು ಮನೆ ಮಾಲೀಕ ಆಟೋ ಬುಕ್ ಮಾಡಿದಾಗ ಆರೋಪಿ ಚಾಲಕ ಸತೀಶ್ ಬಂದಿದ್ದ. ಈ ವೇಳೆ ಆತ್ಮೀಯವಾಗಿ ಮಾತನಾಡಿಕೊಂಡು ಮನೆ ಮಾಲೀಕ ಮತ್ತು ಆತನ ಮಕ್ಕಳನ್ನ ನಿಗದಿತ ಸ್ಥಳಕ್ಕೆ ಡ್ರಾಪ್ ಮಾಡಿದ್ದ ಚಾಲಕ ವಾಪಸ್​​ ಬಂದು ಅವರದ್ದೇ ಮನೆಯ ಬೀಗ ಮುರಿದು ಒಳನುಗ್ಗಿದ್ದ. ಬಳಿಕ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿದಂತೆ ಸುಮಾರು 20 ಲಕ್ಷ ಮೌಲ್ಯದ ವಸ್ತುಗಳನ್ನ ಕದ್ದು ಪರಾರಿಯಾಗಿದ್ದ. ಮಕ್ಕಳೊಂದಿಗೆ ತಮ್ಮ ಪತಿ ಊರಿಗೆ ತೆರಳಿರುವುದನ್ನ ತಿಳಿದ ಅವರ ಪತ್ನಿ ಜನವರಿ 3ರಂದು ಸಂಜೆ ಮನೆ ಬಳಿ ಬಂದಾಗ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ