Breaking News

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

Spread the love

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ‌ ಬಂಧಿತನಾಗಿದ್ದ ಮೂವರು ಆರೋಪಿಗಳಲ್ಲಿ ಒಬ್ಬ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮುಂಬೈನ ಚೆಂಬೂರಿನ ಕಣ್ಣನ್ ಮಣಿ (36) ಗುಂಡೇಟು ತಗುಲಿದ ಆರೋಪಿ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಜ.17 ರಂದು ಉಳ್ಳಾಲದ ಕೆ.ಸಿ. ರೋಡ್​ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ನಲ್ಲಿ ಪಿಸ್ತೂಲ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿರುವ ಸಮಯದಲ್ಲಿ ಈ ಘಟನೆ ನಡೆದಿತ್ತು.

ಆರೋಪಿಗಳಲ್ಲಿ ಮೂವರನ್ನು ನಿನ್ನೆ(ಸೋಮವಾರ) ತಮಿಳುನಾಡಿನಲ್ಲಿ ಬಂಧಿಸಲಾಗಿತ್ತು. ತಮಿಳುನಾಡಿನಲ್ಲಿ ಮುರುಗುಂಡಿ ಥೇವರ್, ಮುಂಬೈನ ಯೋಸುವ ರಾಜೇಂದ್ರನ್ ಮತ್ತು ಕಣ್ಣನ್ ಮಣಿಯನ್ನು ಬಂಧಿಸಲಾಗಿತ್ತು. ಇದರಲ್ಲಿ ಮುಂಬೈನ ಚೆಂಬೂರಿನ ತಿಲಕ್ ನಗರದ ನಿವಾಸಿ ಮಣಿ ಅವರ ಪುತ್ರ ಕಣ್ಣನ್ ಮಣಿ (36) ಎಂಬ ಆರೋಪಿ ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ, ಕಣ್ಣನ್ ಮಣಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆ ವೇಳೆ ಪೊಲೀಸರು ಆತನ ಕಾಲಿಗೆ ಫೈರಿಂಗ್ ಮಾಡಿ ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಕಮಿಷನರ್​ ಹೇಳಿದ್ದೇನು?: ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್​ ಅನುಪನ್ ಅಗರ್ವಾಲ್, “ಆರೋಪಿಗಳು ನೀಡಿದ ಮಾಹಿತಿಯ ಪ್ರಕಾರ, ಇಂದು ಸಂಜೆ 4:20ರ ಸುಮಾರಿಗೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸಿ. ರಸ್ತೆಯ ಅಲಂಕಾರು ಗುಡ್ಡೆ ಬಳಿ ಸ್ಥಳ ಪರಿಶೀಲನೆ ನಡೆಸಲಾಯಿತು. ಆರೋಪಿಗಳು ಮತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಹೆಚ್.ಎನ್. ಮತ್ತು ತನಿಖಾ ತಂಡದ ಸದಸ್ಯರ ಸಮ್ಮುಖದಲ್ಲಿ ತಪಾಸಣೆ ನಡೆಸಲಾಯಿತು” ಎಂದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ