Breaking News

ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥ ಗೌಡ

Spread the love

ಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು.

ಗುರುವಾರ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ ಪಾವತಿಯೂ ಆಗಿದೆ. 282 ಕಾಮಗಾರಿಗಳಿಗೆ ಅನುಮೋದನೆ ನೀಡಿ ಏಜೆನ್ಸಿ ನಿಗದಿಗೊಳಿಸಲಾಗಿದೆ. ಮಾರ್ಚ್ ಒಳಗೆ ಬಾಕಿ ಉಳಿದ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಮಂಡಳಿಯಲ್ಲಿ ಸುಮಾರು ರೂ. 60 ರಿಂದ 70 ಕೋಟಿ ಅನುದಾನವೂ ಇದೆ. ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳಬೇಕಿದೆ. ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಸಂಬಂಧ ಶಾಸಕರಿಗೆ ಪತ್ರ ಬರೆಯಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಂಡಳಿ ವತಿಯಿಂದ ಕಾಲುಸಂಕಗಳು, ಪೆವಿಲಿಯನ್, ಕುಂದಾದ್ರಿ ಬೆಟ್ಟದ ಬಳಿ, ಹುಂಚದಲ್ಲಿ ರಸ್ತೆ ಕಾಮಗಾರಿಗಳು ಸೇರಿದಂತೆ ಸುಮಾರು 1200 ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಾಗುವುದು.

ಜಿಲ್ಲೆಯಲ್ಲಿ ಕಾಲುಸಂಕ, ಸೇತುವೆ ಮತ್ತು ಇತರೆ ಕಾಮಗಾರಿಗಳಿಗೆ ರೂ.200 ಕೋಟಿ ನಬಾರ್ಡ್ ಅನುದಾನಕ್ಕೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಮಂಜೂರಾದಲ್ಲಿ ಮುಂದಿನ ವರ್ಷದಿಂದ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಹಾಗೂ ಈ ಬಾರಿ ಪ್ರತಿ ಶಾಸಕರಿಗೆ ಮಂಡಳಿಯಿಂದ ತಲಾ ರೂ.1 ಕೋಟಿ ಅನುದಾನ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಮಂಡಳಿ ಕಾರ್ಯದರ್ಶಿಗಳಾದ ಮೊಹಮ್ಮದ್ ನಜೀರ್, ಅಧೀನ ಕಾರ್ಯದರ್ಶಿ ಹನುಮಾ ನಾಯ್ಕ್, ಉಪ ನಿರ್ದೇಶಕ ಶಿವಾನಂದ ಕುದ್ರಿ, ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್ ಹಾಜರಿದ್ದರು.


Spread the love

About Laxminews 24x7

Check Also

ನಾಳೆಯಿಂದಲೇ ರಾಜ್ಯಾದ್ಯಂತ ಪ್ರವಾಸ: B.S.Y.

Spread the love ಶಿವಮೊಗ್ಗ: ನಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೇನೆ. ಆದರೆ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ