Breaking News

ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ

Spread the love

ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಆರೋಪಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ ಅವರು, ಸುಮಾರು ಕಡೆ ಕಿರುಕುಳ ಕೊಡುವ ವರದಿಗಳು ಬರುತ್ತಿವೆ. ತೊಂದರೆ ಕೊಟ್ಟರೆ ದೂರು ದಾಖಲು ಮಾಡುವಂತೆ ತಿಳಿಸಿದ್ದೇವೆ. ಫೈನಾನ್ಸ್ ಕಿರುಕುಳದ ಬಗ್ಗೆ ಗೊಂದಲ ಇದೆ. ಸಾಲ‌ ಪಡೆಯೋದು, ಕಿರುಕುಳ ಕೋಡೊದು ಬೇರೆ ವಿಚಾರ. ಆದರೆ, ಸಬ್ಸಿಡಿ ಹೆಸರಿನಲ್ಲಿ ಸಾವಿರಾರು ಜನರಿಗೆ ಸಾಲ ಕೊಟ್ಟಿದ್ದಾರೆ. ಹಣ ತುಂಬುವ ವಿಚಾರದಲ್ಲಿ ಈಗ ಸಂಘರ್ಷ ಆರಂಭವಾಗಿದೆ. ಈಗಾಗಲೇ ಡಿಸಿ ನೇತೃತ್ವದಲ್ಲಿ ಒಂದು ಸಭೆ ನಡೆಸಿದ್ದೇನೆ. ಎರಡು ತಿಂಗಳ‌ ಸಮಯ ಕೇಳಿದ್ದೇವೆ, ಏನಾದರೂ ಅದಕ್ಕೆ ಪರಿಹಾರ ಹುಡುಕುತ್ತೇವೆ. ಒಂದು ತಿಂಗಳಲ್ಲಿ ಏನು ಸಾಧ್ಯವೋ ಅದಕ್ಕೆ ಪರಿಹಾರಕ್ಕೆ ಮಾಡುತ್ತೇವೆ. ಶಿರೂರಿನಲ್ಲಿ ಕೂಡ ಮಹಿಳೆ ಆತ್ಮಹತ್ಯೆ ಪ್ರಕರಣ ನಡೆದಿದೆ. ಸಂಬಂಧಪಟ್ಟವರಿಗೆ ಈ ಬಗ್ಗೆ ದೂರು ಕೊಡಲು ತಿಳಿಸಿರುವೆ ಎಂದರು.

ಮಧ್ಯವರ್ತಿಗಳ ಜೊತೆಗೆ ಫೈನಾನ್ಸ್​ನವರು ಭಾಗಿಯಾಗಿದ್ದಾರೆ ಎಂಬ ಆರೋಪ ಕುರಿತು ಪೊಲೀಸ್ ತನಿಖೆಗೆ ಸೂಚನೆ ಕೊಟ್ಟಿದ್ದೇನೆ. ವರದಿ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ತಾರಿಹಾಳದಲ್ಲಿ‌ ಹಸುಗೂಸು ಸಮೇತ ಬಾಣಂತಿಯನ್ನು ಮನೆಯಿಂದ ಹೊರಹಾಕಿ ಮನೆ ಹರಾಜಿಗಿಟ್ಟ ಪ್ರಕರಣ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸತೀಶ ಜಾರಕಿಹೊಳಿ, ಕುಟುಂಬಸ್ಥರು ದೂರು ಕೊಟ್ಟರೆ ಫೈನಾನ್ಸ್​ನವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸತೀಶ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ