Breaking News

ಬೆಂಗಳೂರು: ಆಂಬ್ಯುಲೆನ್ಸ್​​​​ಗೆ ದಾರಿ ಬಿಡದ ಆಟೋ ಚಾಲಕನ ಬಂಧನ, ಬಿಡುಗಡೆ

Spread the love

ಬೆಂಗಳೂರು: ರಸ್ತೆಯಲ್ಲಿ ಸಂಚರಿಸುವಾಗ ನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್​​ಗೆ ದಾರಿ ಬಿಡದೆ, ಮೊಂಡಾಟ ತೋರಿದ್ದ ಆರೋಪಿ ಆಟೋ ಚಾಲಕನನ್ನು ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಬಂಧಿಸಿ, ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ.

ಪರಮೇಶ್ ಎಂಬಾತನೆ ಬಂಧಿತನಾಗಿದ್ದ ಆಟೋ ಚಾಲಕ. ಕೂಡ್ಲುನಲ್ಲಿ ವಾಸವಾಗಿರುವ ಈತ ನೆರೆಮನೆಯ ವ್ಯಕ್ತಿಯೋರ್ವರಿಂದ ಆಟೋ ಪಡೆದು ಜ.21ರಂದು ಹರಳೂರು ಮಾರ್ಗವಾಗಿ ಚಲಾಯಿಸುತ್ತಿದ್ದ. ಈ ವೇಳೆ ಹಿಂಬದಿಯಿಂದ ಸೈರನ್ ಮೊಳಗಿಸಿ ಆಂಬ್ಯುಲೆನ್ಸ್ ಬಂದರೂ ಚಾಲಕ ದಾರಿ ಬಿಟ್ಟಿರಲಿಲ್ಲ. ತುರ್ತಾಗಿ ಆಸ್ಪತ್ರೆಗೆ ಹೋಗಬೇಕಾಗಿದ್ದರಿಂದ ದಾರಿ ಮಾಡಿಕೊಡುವಂತೆ ವಾಯ್ಸ್ ಸಂದೇಶ ಮೂಲಕ ತಿಳಿಸಿದರೂ ಕ್ಯಾರೆ ಅನ್ನದೆ ಆಟೊ ಚಾಲನೆ ಮುಂದುವರೆಸಿದ್ದ‌ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಮನಿಸಿದ ಬೆಳ್ಳಂದೂರು ಟ್ರಾಫಿಕ್ ಪೊಲೀಸರು ಆಟೋ ನೋಂದಣಿ ಸಂಖ್ಯೆ ಆಧರಿಸಿ ಚಾಲಕನನ್ನು ಬಂಧಿಸಿ ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ಲೈಸೆನ್ಸ್ ರದ್ದು ಕೋರಿ ಆರ್​​ಟಿಓಗೆ ಶಿಫಾರಸು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

49 ವರ್ಷದ ಆಟೋ ಚಾಲಕ ಪರಮೇಶ್, ನನಗೆ ಬಿಪಿ ಶುಗರ್ ಇದ್ದು, ಹಿಂಬದಿಯಿಂದ ಆ್ಯಂಬುಲೆನ್ಸ್ ಬರುತ್ತಿರುವುದು ಗೊತ್ತಾಗಿರಲಿಲ್ಲ ಎಂದು ಪೊಲೀಸರ ಮುಂದೆ ಸಮಜಾಯಿಷಿ ನೀಡಿದ್ದ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ