Breaking News

ಸೋದರಿಯರು. ಆತ್ಮಹತ್ಯೆ

Spread the love

ಕಲಬರುಗಿ: ಸೋದರಿಯರಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.

ಐಶ್ವರ್ಯ(19) ಮತ್ತು ಸಾರಿಕಾ (17) ಆತ್ಮಹತ್ಯೆಗೆ ಶರಣಾದ ಸೋದರಿಯರು. ಐನಾಪುರ ಗ್ರಾಮದ ವಿಶ್ವನಾಥ್ ಎಂಬವರು ಮಕ್ಕಳು. ಮನೆಯಲ್ಲಿ ಯಾರು ಇಲ್ಲದಿದ್ದಾಗ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿರುವ ಡೆತ್ ನೋಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Spread the loveಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ  ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ