ಬೆಂಗಳೂರು: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಮಾತಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಸ್ಪರ್ಧಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನೇರವಾದ ಉತ್ತರ ನೀಡಲಿಲ್ಲ.
ಸಂಸತ್ತಿನ ಅಧಿವೇಶನ ಜಾರಿಯಲ್ಲಿರುವಾಗಲೇ ತಾವೆಲ್ಲ ದೆಹಲಿಗೆ ಹೋಗಿ ರಾಜ್ಯದ ಬಿಜೆಪಿ ಸಂಸದರನ್ನು ಭೇಟಿಯಾಗಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕೆಂಬ ಒಂದು ನಿರ್ಣಯವನ್ನು ತೆಗೆದುಕೊಂಡು ಅದನ್ನು ವರಿಷ್ಠರ ಹಮನಕ್ಕೆ ತರುತ್ತೇವೆ ಅಂತ ಹೇಳಿದ ಯತ್ನಾಳ್, ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಯಾರು ಸ್ಪರ್ಧಿಸಬೇಕೆಂದು ಅಲ್ಲೇ ನಿರ್ಣಯಿಸಲಾಗುವುದು ಎಂದರು.
Laxmi News 24×7