Breaking News

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.

Spread the love

ಬೆಂಗಳೂರು : ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.
ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ.
ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ ಜಾರಕಿಹೊಳಿ‌ ಅವರ ಕತೃತ್ವಶಕ್ತಿ ಮತ್ತು ಪೂರಕ ದಾಖಲೆಗಳನ್ನು ಪರಿಶೀಲಿಸಿದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ, ಒಟ್ಟು ಅನುದಾನದ ಶೇ. 60ರಷ್ಟು ಹಣಕಾಸಿನ ನೆರವು ನೀಡಲಿದೆ. ಉಳಿದ ಶೇ. 40ರಷ್ಟು ರಾಜ್ಯ ಸರ್ಕಾರದ ಪಾಲಿನ‌ ಅನುದಾನಕ್ಕೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ