Breaking News

ಮತ್ತೋರ್ವ ನಕ್ಸಲ್ ಕೋಟೆಹೊಂಡ ರವಿ ಶರಣಾಗಿದ್ದಾರೆ.

Spread the love

ಬೆಂಗಳೂರು: ನಕ್ಸಲ್ ಚಳವಳಿಯಲ್ಲಿ ಸಕ್ರಿಯನಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ 4 ಕಿ.ಮೀ ದೂರದಲ್ಲಿನ ಅರಣ್ಯ ಐಬಿಯಲ್ಲಿ ಶರಣಾಗಿದ್ದಾರೆ.

ಕೊನೆಯ ಭೂಗತ ನಕ್ಸಲ್ (ಯುಜಿ ನಕ್ಸಲ್) ಎಂದು ಗುರುತಿಸಲ್ಪಟ್ಟಿದ್ದ ಕೋಟೆಹೊಂಡ ರವಿ ಸಮಾಜದ ಮುಖ್ಯವಾಹಿನಿ ಬರಲು ಶರಣಾಗಿದ್ದು, ಶರಣಾಗತಿ ಪ್ರಕ್ರಿಯೆಗಾಗಿ ಚಿಕ್ಕಮಗಳೂರಿಗೆ ಕರೆದೊಯ್ಯಲಾಗಿದೆ. ಅಲ್ಲದೇ ವರ್ಷಗಳಿಂದ ಭೂಗತರಾಗಿರುವ ನಕ್ಸಲ್ ತೊಂಬಟ್ಟು ಲಕ್ಷ್ಮಿ ಸಹ ಶರಣಾಗಲು ನಿರ್ಧರಿಸಿದ್ದು, ನಾಳೆ ಚಿಕ್ಕಮಗಳೂರು/ಉಡುಪಿಯಲ್ಲಿ ಶರಣಾಗಲಿದ್ದಾರೆ ಎಂಬ‌ ಮಾಹಿತಿಯನ್ನ ರಾಜ್ಯ ಗುಪ್ತಚರ ಇಲಾಖೆ ಖಚಿತಪಡಿಸಿದೆ.

ಉಡುಪಿ ಜಿಲ್ಲೆಯ ಹೆಬ್ರಿ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಎನ್​​ಕೌಂಟರ್‌ನಲ್ಲಿ ನಕ್ಸಲ್ ಕಮಾಂಡರ್ ವಿಕ್ರಮ್ ಗೌಡ ಹತ್ಯೆಯಾಗಿತ್ತು. ವಿಕ್ರಂ ಗೌಡನ ತಂಡದಲ್ಲಿದ್ದ ಚಿಕ್ಕಮಗಳೂರು ಭಾಗದ ರವಿ ಕೂಡಾ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ವಿಕ್ರಂ ಗೌಡ ಎನ್​ಕೌಂಟರ್ ಬಳಿಕ ತಂಡದಿಂದ ಬೇರ್ಪಟ್ಟು ಭೂಗತನಾಗಿದ್ದರು.

ಆಪರೇಷನ್ ನಕ್ಸಲ್ ಶರಣಾಗತಿ ಪೂರ್ಣ: ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ನಿರಂತರ ಪ್ರಯತ್ನಗಳನ್ನು ಮಾಡಿದ 22 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪದಕ ಪ್ರಶಸ್ತಿ ಘೋಷಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ