Breaking News

ಶೇಡಬಾಳ ಪಟ್ಟಣದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹಣ ವಿತರಣೆ.

Spread the love

ಶೇಡಬಾಳ ಪಟ್ಟಣ ಪಂಚಾಯಿತಿಯಲ್ಲಿ ೨೦೨೧-೨೨ ಮತ್ತು ೨೦೨೨-೨೩ ಸಾಲಿನಲ್ಲಿ ಐದು ಅಂಗವಿಕಲರಿಗೆ ತ್ರೀಚಕ್ರವಾಹಣಗಳನ್ನು ವಿತರಿಸುವ ಕಾರ್ಯಕ್ರಮ ಕಾಗವಾಡ ಶಾಸಕ ರಾಜು ಕಾಗೆಯವರ ಹಸ್ತೆಯಿಂದ ನೆರವೇರಿತು.

ಶನಿವಾರ ಬೆಳಗ್ಗೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉತ್ಕರ್ಶ ಪಾಟೀಲ ಇವರ ಅಧ್ಯಕ್ಷತೆಯಲ್ಲಿ ತ್ರೀಚಕ್ರವಾಹಣ ವಿತರಿಸುವ ಕಾರ್ಯಕ್ರಮ ನೆರವೇರಿತು.ಫಲಾನುಭವಿಗಳಾದ ಸೊಬಣ್ಣ ಹೊನಕಾಂಬಳೆ, ಸನ್ಮತಿ ಪಾಟೀಲ, ಸುನಿತಾ ನಾಂದ್ರೆ, ವಿರುಪಾಕ್ಷ ಮಾಳಿ, ಈರಣ್ಣ ಅಡಹಳ್ಳಿ ಇವರಿಗೆ ಶಾಸಕರ ಹಸ್ತೆಯಿಂದ ತ್ರೀಚಕ್ರವಾಹಣ ವಿತರಿಸಲಾಯಿತು.

ಶಾಸಕ ರಾಜು ಕಾಗೆ ಅವರು ತ್ರೀಚಕ್ರವಾಹಣ ಪಡೆಯುವ ಅಂಗವಿಕಲರಿಗೆ ಕೆಲವು ಸೂಚನೆಗಳನ್ನು ನೀಡುವಾಗ, ನೀವು ಈ ವಾಹನವನ್ನು ನಿಮ್ಮ ಜೀವನದಲ್ಲಿ ಸದುಪಯೋಗಪಡಿಸಿಕೊಳ್ಳಿ. ಇದನ್ನು ಬೇರೆಯವರಿಗೆ ಕೊಡಬೇಡಿಯೆಂದರು.

ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸುರೇಶ ಪತ್ತಾರ ಸ್ವಾಗತಿಸಿದರು. ಅಭಿಯಂತರಾದ ಗುರುಪ್ರಸಾದ ಹಿರೇಮಠ ಫಲಾನುಭವಿಗಳ ಹೆಸರು ಘೋಷಣೆ ಮಾಡಿದರು. ವೆಂಕಟೇಶ ಚಲವಾದಿ ವಂದಿಸಿದರು. ಪಟ್ಟಣ ಪಂಚಾಯತಿಯ ಅಧ್ಯಕ್ಷ ಉತ್ಕರ್ಶ ಪಾಟೀಲ, ಉಪಾಧ್ಯಕ್ಷ ದೀಪಾ ನಾಮದೇವ ಹೊನಕಾಂಬಳೆ, ಮತ್ತು ಎಲ್ಲ ಸದಸ್ಯರು, ಸನ್ಮತಿ ಶಿಕ್ಷಣ ಸಮೀತಿಯ ಅಧ್ಯಕ್ಷ ವಿನೋದ ಬರಗಾಲೆ, ವೃಷಭ ಚೌಗುಲೆ, ಅಣ್ಣಾ ಅರವಾಡೆ, ಪ್ರಕಾಶ ಮಾಳಿ, ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಾರದಲ್ಲಿ 6 ದಿನ ಮೌನ ವ್ರತ: ಭಕ್ತರ ಅಚ್ಚರಿಗೆ ಕಾರಣವಾಯ್ತು ಗವಿಸಿದ್ದೇಶ್ವರ ಸ್ವಾಮೀಜಿ ನಡೆ

Spread the loveಕೊಪ್ಪಳ, ಅಕ್ಟೋಬರ್​ 14: ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು (Abhinava Gavisiddeshwara Swamiji) ನಡೆದಾಡುವ ದೇವರು ಎಂದೇ ಪ್ರಸಿದ್ದ. ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ