Breaking News

ಶಿಕ್ಷಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವೆಗೂ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲ

Spread the love

ಧಾರವಾಡ : ಖಾಸಗಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವೆಗೂ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆ ಈಡೇರಿಕೆ ಕುರಿತು ಚರ್ಚಿಸಲು ಸಭೆ ನಿಗದಿ ಮಾಡಲಾಗುವುದಲ್ಲದೆ, ಸದನದಲ್ಲಿ ಸಹ ಚರ್ಚೆ ನಡೆಸುವುದಾಗಿ ಶಿಕ್ಷಣ ಸಚಿವರು ಹೇಳಿದ್ದಾರೆ. ಆದರೆ ಕೇವಲ ಸಭೆ ಕರೆದರೆ ಸಾಲದು, ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಕೇವಲ ಭರವಸೆ ನೀಡಿದರೆ, ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನೂ ಕೂಡಾ ನಾಳೆಯಿಂದ ಸದನಕ್ಕೆ ಹಾಜರಾಗಿ ಚರ್ಚೆ ನಡೆಸುತ್ತೇನೆ. ಅಗತ್ಯ ಬಿದ್ದರೆ ಸದನದಲ್ಲಿ ಸಹ ಹೋರಾಟ ನಡೆಸಲಾಗುವುದು.  ಸರ್ಕಾರದ ನಿರ್ಲಕ್ಷದಿಂದ ಉತ್ತರ ಕರ್ನಾಟಕ ಭಾಗದಲ್ಲಿನ ಖಾಸಗಿ ಶಾಲೆಗಳು ಸಮಸ್ಯೆಗೆ ಸಿಲುಕಿವೆ. ಅವರ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಈ ಶಾಲೆಗಳು ಬಂದ್ ಆಗುವುದರಲ್ಲಿ ಸಂಶಯವೇ ಇಲ್ಲ.

ಹೀಗಾಗಿ ಸರ್ಕಾರ ನಿರ್ಲಕ್ಷ ವಹಿಸದೆ ಶೀಘ್ರದಲ್ಲೇ ಸಮಸ್ಯೆ ಪರಿಹರಿಸಿ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ