Breaking News

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಆರಂಭದಲ್ಲೇ ವಿಘ್ನ

Spread the love

ಧಾರವಾಡ: ಸುದೀರ್ಘ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯ ಸರ್ಕಾರ ಅಸ್ತು ಅಂದಿದೆ. ಇನ್ನೇನು ಕಾರ್ಯಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವಷ್ಟರಲ್ಲಿ ಹೊಸ ಪಾಲಿಕೆ ಸೇರಲು ಕೆಲ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್​ಗಳನ್ನು ವಿಂಗಡಿಸಿ, 26 ವಾರ್ಡ್​​ ಧಾರವಾಡಕ್ಕೆ ನೀಡಿ ಪ್ರತ್ಯೇಕ ಪಾಲಿಕೆ ಘೋಷಿಸಲಾಗಿದೆ. ಈ ಕುರಿತು ಸರ್ಕಾರ ಇತ್ತೀಚೆಗೆ ಗೆಜೆಟ್ ನೋಟಿಪಿಕೇಷನ್​ ಸಹ ಮಾಡಿದೆ.

ಇದರ ನಡುವೆ ಧಾರವಾಡ ಸುತ್ತಮುತ್ತಲಿನ ಗ್ರಾಮಗಳನ್ನೂ ಹೊಸ ಪಾಲಿಕೆಗೆ ಸೇರಿಸಿ ಬಿಡುತ್ತಾರೆ ಎಂಬ ಗುಲ್ಲೆದ್ದಿದೆ. ಇದರಿಂದ ರೊಚ್ಚಿಗೆದ್ದಿರುವ ನರೇಂದ್ರ, ಮುಮ್ಮಿಗಟ್ಟಿ ಹಾಗೂ ಇತರೆ ಗ್ರಾಮಗಳ ಜನರು ಹೋರಾಟಕ್ಕೆ ಇಳಿದಿದ್ದಾರೆ.ಚಕ್ಕಡಿ, ಟ್ರ್ಯಾಕ್ಟರ್​ಗಳ ಮೂಲಕ ಪ್ರತಿಭಟನಾ ಮೆರವಣಿಗೆಯೊಂದಿಗೆ ಧಾರವಾಡಕ್ಕೆ ಬಂದು, ಜಿಲ್ಲಾಧಿಕಾರಿ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ತೆಗೆದುಕೊಳ್ಳಬೇಕೆಂದರೆ ಅಲ್ಲಿನ ರೈತರ ಸಂಖ್ಯೆ ಶೇ.50ಕ್ಕೂ ಕಡಿಮೆ ಇರಬೇಕು. ಆದರೆ ಈ ಗ್ರಾಮಗಳಲ್ಲಿ ಶೇ.90ರಷ್ಟು ರೈತರೇ ಇದಾರೆ. ಇಲ್ಲಿನ ಬಹುತೇಕ ಜಮೀನು ಕೃಷಿ ಆಧಾರಿತವಾಗಿದೆ. ಹೀಗಾಗಿ ನಿಯಮಗಳ ಪ್ರಕಾರ ನರೇಂದ್ರ ಗ್ರಾಮವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳಲು ಬರೋದಿಲ್ಲ ಅನ್ನೋದು ಗ್ರಾಮಸ್ಥರ ವಾದ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ