Breaking News

ಸರ್ಕಾರಿ ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವು

Spread the love

ಚಾಮರಾಜನಗರ, : ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ (death) ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.

ಸರ್ಕಾರಿ ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವು ಆರೋಪ: ಆಸ್ಪತ್ರೆಯಲ್ಲಿ ಹೈಡ್ರಾಮಾ

ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ ಬಾಳಬೇಕಾದ 6 ತಿಂಗಳ ಕಂದನ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ತನ್ನ ಮಗುವಿನ ಸಾವಿಗೆ ಕಾರಣವಾದ ವೈದ್ಯನ ವಿರುದ್ದ ಕುಟುಂಬಸ್ಥರು ರೊಚ್ಚಿಗೆದ್ದಿದ್ದು ಸರ್ಕಾರಿ ಆಸ್ಪತ್ರೆಯೇ ರಣಾಂಗಣವಾಗಿ ಮಾರ್ಪಟ್ಟಿತ್ತು.

ಹಂಗಳ ಗ್ರಾಮದ ನಿವಾಸಿಗಳಾದ ಆನಂದ್ ಮತ್ತು ಶುಭಮಾನಸ ದಂಪತಿಯ ಆರು ತಿಂಗಳ ಮಗು ಪ್ರಖ್ಯಾತ್​ಗೆ ಇಂದು ಕಿವಿ ಚುಚ್ಚಿಸೋಕೆ ಮುಂದಾಗಿದ್ದರು. ಆದರೆ ಚಿಕ್ಕ ಕಂದವಾದ ಕಾರಣ ಮಗುವಿಗೆ ನೋವು ಆಗ ಬಾರದು ಎಂಬ ಕಾರಣಕ್ಕೆ ಬೋಮ್ಮಲಾಪೂರ ಸರ್ಕಾರಿ ಆಸ್ಪತ್ರೆಗೆ ಮಗುವನ್ನ ಕರೆದುಕೊಂಡು ಹೋದ ಪೋಷಕರು ಕಿವಿಗೆ ಬೆಂಟ್ ಇಂಜೆಕ್ಷನ್(ಅನಸ್ತೀಷಿಯಾ) ಕೊಡಿಸಿದ್ದಾರೆ. ಈ ಇಂಜೆಕ್ಷನ್ ನೀಡಿದ 10 ನಿಮಿಷದೊಳಗೆ ಮಗುವಿಗೆ ರಿಯಾಕ್ಷನ್ ಆಗಿದೆ. ಇದ್ದಕ್ಕಿದ್ದಂತೆ ಪಿಡ್ಸ್ ಬಂದಿದೆ, ತಕ್ಷಣವೇ ಬೋಮ್ಮಲಾಪುರ ಸರ್ಕಾರಿ ಆಸ್ಪತ್ರೆಯಿಂದ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಮಗುವನ್ನ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆ ತಲುಪುವ ಮುನ್ನವೆ ಮಗು ಉಸಿರು ಚೆಲ್ಲಿದೆ. ಈ ವಿಚಾರ ತಿಳಿದು ಮೃತ ಮಗುವಿನ ಕುಟುಂಬಸ್ಥರು ರೊಚ್ಚಿಗೆದ್ದು ವೈದ್ಯರಿಗೆ ಕ್ಲಾಸ್ ತೆಗೆದು ಕೊಂಡಿದ್ದಾರೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ