Breaking News

ಸಿದ್ದರಾಮಯ್ಯ ನವೆಂಬರ್ ಅಂತ್ಯದ ವೇಳೆಗೆ ಅಧಿಕಾರದಿಂದ ಕೆಳಗಿಳಿಯಬಹುದು: ಅಶೋಕ್

Spread the love

ಸಿದ್ದರಾಮಯ್ಯ ನವೆಂಬರ್ ಅಂತ್ಯದ ವೇಳೆಗೆ ಅಧಿಕಾರದಿಂದ ಕೆಳಗಿಳಿಯಬಹುದು: ಅಶೋಕ್

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಸೂತಕದ ಛಾಯೆ ಆವರಿಸಿದೆ. ಮೈಕ್ರೋಫೈನಾನ್ಸ್ ಹಾವಳಿಯಿಂದ ಜನರು ಸಾಲದ ಸುಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.

ಹಾಸನದ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ರೋಫೈನಾನ್ಸ್​ ಸಂಸ್ಥೆಗಳಿಂದ ಸುಮಾರು 25ಕ್ಕೂ ಹೆಚ್ಚು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸರಿಸುಮಾರು 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚಿನ ಬೆಳವಣಿಗೆ ನೋಡುತ್ತಿದ್ದರೆ ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಅಡಗಿ ಕುಳಿತಿದ್ದ ರೌಡಿಗಳು ಹೊರಬಂದು ಅಟ್ಟಹಾಸ ಮರೆಯುತ್ತಿದ್ದಾರೆ. ಪರೋಕ್ಷವಾಗಿ ರೌಡಿಗಳಿಗೆ ಉದ್ಯೋಗ ಭಾಗ್ಯವನ್ನು ಕೊಟ್ಟಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

Spread the loveಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ