Breaking News

ವಿಧಾನಸಭೆಯಲ್ಲಿ ಕರ್ನಾಟಕ ಸ್ಟಾಂಪ್ ವಿಧೇಯಕ ಮಂಡನೆ

Spread the love

ಬೆಂಗಳೂರು,ಡಿ.8- ರಾಜ್ಯ ಸರ್ಕಾರವು ಕರ್ನಾಟಕ ಕೈಗಾರಿಕಾ ನೀತಿ 2020-25ರಲ್ಲಿ ಪ್ರಸ್ತಾಪಿಸಿರುವ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದ ಕರ್ನಾಟಕ ಸ್ಟಾಂಪ್(2ನೇ ತಿದ್ದುಪಡಿ) ವಿಧೇಯಕ 2020ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಶಾಸನ ರಚನಾ ಕಲಾಪದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು.

2020-21ರ ಆಯವ್ಯಯ ಗಾತ್ರದಲ್ಲಿ ಪ್ರಸ್ತಾಪಿಸಿರುವ 35ಲಕ್ಷ ರು.ವರೆಗಿನ ಫ್ಲಾಟ್ ಅಥವಾ ಅಪಾರ್ಟ್‍ಮೆಂಟ್‍ನ ಮೊದಲ ಮಾರಾಟಕ್ಕೆ ಸ್ಟಾಂಪ್ ತೆರಿಗೆಯನ್ನು ಕಡಿಮೆ ಮಾಡುವ ಉದ್ದೇಶವನ್ನು ಈ ವಿದೇಯಕ ಹೊಂದಿದೆ.

ಈ ಉದ್ದೇಶ ಸ್ಥಾಪಿಸಲು ಈಗಲೂ ಆಧ್ಯಾದೇಶವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ಕರ್ನಾಟಕ ಸ್ಟಾಂಪ್ ಅನಿಯಮ 1957ನ್ನು ಮತ್ತಷ್ಟು ತಿದ್ದುಪಡಿ ಮಾಡುವುದನ್ನು ವಿದೇಯಕದಲ್ಲಿ ಪ್ರಸ್ತಾಪಿಸಲಾಗಿದೆ.


Spread the love

About Laxminews 24x7

Check Also

ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧಬ

Spread the loveವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧಬ : ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ