Breaking News

ಶನಿವಾರದೊಳಗೆ ಸೌರ ವಿದ್ಯುತ್ ಸರಿಯಾಗಿ ಪೂರೈಕೆಯಾಗಿದ್ದರೇ ಹೆಸ್ಕಾಂ ಕಚೇರಿಗೆ ಮುತ್ತಿಗೆ; ಮೆಂಡಿಲ್ ಗ್ರಾಮಸ್ಥರ ಎಚ್ಚರಿಕೆ…

Spread the love

ಶನಿವಾರದೊಳಗೆ ಸೌರ ವಿದ್ಯುತ್ ಸರಿಯಾಗಿ ಪೂರೈಕೆಯಾಗಿದ್ದರೇ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಖಾನಾಪೂರ ತಾಲೂಕಿನ ಮೆಂಡಿಲ್ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಕಳೆದ ಎಂಟು ತಿಂಗಳಿನಿಂದ ಮೆಂಡಿಲ್ ಗ್ರಾಮದಲ್ಲಿ ಸೌರ ವಿದ್ಯುತ್ ಸರಬರಾಜು ವ್ಯತ್ಯಯ ಗೊಂಡಿದ್ದು,ಖಾನಾಪೂರ ತಾಲೂಕಿನ ಮೆಂಡಿಲ್ ಗ್ರಾಮಸ್ಥರು ಕಳೆದ ಎಂಟು ತಿಂಗಳಿನಿಂದ ಕತ್ತಲೆಯಲ್ಲಿ ಬದುಕುತ್ತಿದ್ದಾರೆ. ಹೆಸ್ಕಾಂ ಸಮಸ್ಯೆ ನಿವಾರಣೆ ಮಾಡುವುದರಲ್ಲಿ ವಿಫಲವಾಗಿದೆ.

ಇದರಿಂದ ಬೇಸತ್ತು ಮೆಂಡಿಲ್ ಗ್ರಾಮಸ್ಥರು ಖಾನಾಪೂರ ಹೆಸ್ಕಾಂ ಇಲಾಖೆಯ ಕಚೇರಿಗೆ ಭೇಟಿ ನೀಡಿ, ತಮ್ಮ ಸಮಸ್ಯೆಯನ್ನು ಬರುವ ಶನಿವಾರದೊಳಗೆ ನಮ್ಮ ಪರಿಹರಿಸಿ ಸೌರ ವಿದ್ಯುತ್ ಸರಿಯಾಗಿ ಪೂರೈಕೆಗೆ ಆಗದಿದ್ರೆ ಹೆಸ್ಕಾಂ ಇಲಾಖೆಯ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ನು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಹೆಸ್ಕಾಂ ಅಧಿಕಾರಿಗಳು ಶೀಘ್ರದಲ್ಲೇ ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಿರೋಲಿ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಗವಾಸ್ಕರ್, ನಾಮದೇವ ಪಾಟೀಲ್,ಶಾಬಾ ಮಲಿಕ್, ಜಯರಾಂ ಪಾಟೀಲ್,ವಿಜಯ ಮಾದಾರ ಸೇರಿದಂತೆ ಮೆಂಡಿಲ್ ಗ್ರಾಮಸ್ಥರು ಭಾಗಿದ್ಧರು.

 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ