Breaking News
Home / ಜಿಲ್ಲೆ / ಬೆಂಗಳೂರು / ಸಿಎಂ ಕಾರ್ಯವೈಖರಿ ವಿರುದ್ಧ ಶಾಸಕರ ಅಸಮಾಧಾನ, ವರದಿ ಕೇಳಿದ ಹೈಕಮಾಂಡ್..!

ಸಿಎಂ ಕಾರ್ಯವೈಖರಿ ವಿರುದ್ಧ ಶಾಸಕರ ಅಸಮಾಧಾನ, ವರದಿ ಕೇಳಿದ ಹೈಕಮಾಂಡ್..!

Spread the love

ಬೆಂಗಳೂರು,ಡಿ.8- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೈಖರಿ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ಯಪಡಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ವರದಿ ನೀಡುವಂತೆ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವಂತೆ ಪಕ್ಷದ ಕೆಲ ನಾಯಕರು ಹೈಕಮಾಂಡ್‍ಗೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಈ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪ ವಿರುದ್ದ ಸಿಡಿದೆದ್ದಿರುವ ಅತೃಪ್ತ ಬಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಚೇರಿ ಪೂಜೆ ನೆಪದಲ್ಲಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರಿಗೆ ದೂರು ಸಲ್ಲಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಯಡಿಯೂರಪ್ಪ ಅವರನ್ನು ನಿಯಂತ್ರಿಸಿ. ಇಲ್ಲ ನಾಯಕತ್ವ ಬದಲಿಸಿ ಎಂದು ದೂರು ನೀಡಿದ್ದಾರೆ ಎನ್ನಲಾಗಿತ್ತು.

ನಿಗಮ, ಮೀಸಲಾತಿ ಘೋಷಣೆಗಳ ಮೂಲಕ ಹಲವು ಸಮುದಾಯಗಳ ಮೇಲೆ ಹಿಡಿತ ಸಾಸಲು ಪ್ರಯತ್ನಿಸುತ್ತಿದ್ದಾರೆ. ಸ್ವಜನಪಕ್ಷಪಾತ, ಕುಟುಂಬದ ಹಸ್ತಕ್ಷೇಪ ಮಿತಿ ಮೀರುತ್ತಿದೆ. ಕೂಡಲೇ ಅವರನ್ನು ನಿಮ್ಮ ಹಿಡಿತಕ್ಕೆ ತೆಗೆದುಕೊಳ್ಳಿ. ಅಥವಾ ನಾಯಕತ್ವ ಬದಲಾವಣೆ ಮಾಡುತ್ತೀರಾ ಎಂದಾದರೇ ಅದಕ್ಕೂ ನಮ್ಮ ಅಭ್ಯಂತರ ಇಲ್ಲ ಎಂದು ತಿಳಿಸಿದ್ದಾರೆ ಎಂದು ಎನ್ನಲಾಗಿದೆ.

ಇದರ ನಡುವೆಯೇ ಯಡಿಯೂರಪ್ಪನವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕರನ್ನು ಪ್ರತ್ಯೇಕವಾಗಿ ಕರೆದು ಅವರ ಅಳಲನ್ನು ಆಲಿಸಿ ವಿಸ್ತೃತ ವರದಿ ನೀಡುವಂತೆ ವರಿಷ್ಠರು ರಾಜ್ಯದ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಕಳೆದ ವಾರ ಎರಡು ದಿನಗಳ ಭೇಟಿಗೆ ರಾಜ್ಯಕ್ಕೆ ಬಂದಿದ್ದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಇಂತಹದ್ದೊಂದು ಸೂಚನೆಯನ್ನು ರವಾನೆ ಮಾಡಿದ್ದಾರೆ. ಅರುಣ್ ಸಿಂಗ್ ಬೆಂಗಳೂರಿಗೆ ಬಂದಿದ್ದ ವೇಳೆ ಕೆಲ ಬಿಜೆಪಿ ಶಾಸಕರು ಅವರನ್ನು ಭೇಟಿ ಮಾಡಿ ಯಡಿಯೂರಪ್ಪನವರ ಬಗ್ಗೆ ದೂರುದುಮ್ಮಾನ ಹೇಳಿಕೊಂಡಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ