Breaking News

ಭಿಕ್ಷಾಟನೆ ನಡೆಸಿದ ಸಿದ್ದಗಂಗಾ ಮಠದ ಸ್ವಾಮೀಜಿ

Spread the love

ತುಮಕೂರು: ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ನಗರದೆಲ್ಲೆಡೆ ಸಿದ್ದಗಂಗಾ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ ಜೋಳಿಗೆ ಹಿಡಿದು ಭಿಕ್ಷಾಟನೆ ಮಾಡಿದರು.

ಜಾತ್ರೆಯ ಪ್ರಯುಕ್ತ ವಾಡಿಕೆಯಂತೆ ಪ್ರತಿ ವರ್ಷ ತುಮಕೂರು ನಗರದ ಮಂಡಿಪೇಟೆ ಸೇರಿದಂತೆ ವಿವಿಧೆಡೆ ಭಿಕ್ಷಾಟನೆ ನಡೆಸಲಾಗುತ್ತದೆ. ಅದೇ ರೀತಿ, ಈ ಬಾರಿಯೂ ಭಿಕ್ಷಾಟನೆ ನಡೆಸಿದ ಸಿದ್ದಗಂಗಾ ಮಠದ ಶ್ರೀಗಳು, ಭಕ್ತರು, ವರ್ತಕರಿಂದ ದವಸ ಧಾನ್ಯಗಳನ್ನು ಕಾಣಿಕೆ ರೂಪದಲ್ಲಿ ಸ್ವೀಕರಿಸಿದರು.

siddaganga-mutt-swamiji

ಸ್ವಾಮೀಜಿಗಳು ನಗರದ ಮಂಡಿಪೇಟೆ, ಅಶೋಕ್ ರಸ್ತೆ, ಎಪಿಎಂಸಿ ಯಾರ್ಡ್​ಗಳಲ್ಲಿ ಭಿಕ್ಷಾಟನೆ ಮಾಡಿದರು. ಅಕ್ಕಿ, ರಾಗಿ, ತೊಗರಿ ಬೆಳೆ, ಬೆಲ್ಲ ಕಾಣಿಕೆ ಕೊಟ್ಟು ಭಕ್ತರು ಕೃತಾರ್ಥರಾದರು.

ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, “ಫೆ.20ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಆಶಯದೊಂದಿಗೆ ಈ ರೀತಿ ಭಿಕ್ಷಾಟನೆಯನ್ನು ಪ್ರತಿ ವರ್ಷ ನಡೆಸಲಾಗುತ್ತದೆ” ಎಂದು ತಿಳಿಸಿದರು.

ಸಿದ್ದಗಂಗಾ ಮಠದ ಆವರಣದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತದೆ.


Spread the love

About Laxminews 24x7

Check Also

ನಗಲೇ ಇಲ್ಲ ರತಿ ಮನ್ಮಥರು- ಮೌನ ಶಪಥ, ಯಾರಿಗೂ ಸಿಗದ ₹ 13 ಲಕ್ಷ ಬಹುಮಾನ

Spread the loveರಾಣಿಬೆನ್ನೂರು: ಇಲ್ಲಿನ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ನಗರದ ಶ್ರೀ ರಾಮಲಿಂಗೇಶ್ವರ ಸೇವಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ