Breaking News

ಪೊಲೀಸ್​ ಠಾಣೆ ಮುಂದೆ‌ ತಂದೆಯ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ

Spread the love

ಬೆಳಗಾವಿ, ಫೆಬ್ರವರಿ 08: ಪೊಲೀಸ್​ ಠಾಣೆ (Police Station) ಎದರು ತಂದೆಯ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ ನಡೆಸಿರುವ ಘಟನೆ ರಾಯಬಾಗ (Raibag) ತಾಲೂಕಿನ ಹಾರೂಗೇರಿಯಲ್ಲಿ (Harugeri) ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿಯವರು ಹಾರೂಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಿದ್ದಾರೆ.

ಜನವರಿ10ರಂದು ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ತಂದೆ ಅಣ್ಣಪ್ಪ ಅವರ ಜಮೀನಿಗೆ ಬಾಬು ನಡೋಣಿ ಪ್ರತಾಪ್ ಹರೋಲಿ, ವಸಂತ ಚೌಗಲಾ ಎಂಬುವರು ಅಕ್ರಮವಾಗಿ ಪ್ರವೇಶ ಮಾಡಿದ್ದರು. ಅಕ್ರಮವಾಗಿ ಪ್ರವೇಶಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬಾಬು ನಡೋಣಿ, ಪ್ರತಾಪ್ ಹರೋಲಿ, ವಸಂತ ಚೌಗಲಾ ಮತ್ತು ಇವರ ಗ್ಯಾಂಗ್‌ ಅಣ್ಣಪ್ಪ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕೂಡಲೆ ಅಣ್ಣಪ್ಪ 112ಗೆ ಕರೆ ಮಾಡಿ ಪೊಲೀಸರನ್ನು ಕರೆಸಿದ್ದರು. ಬಳಿಕ, ಅಣ್ಣಪ್ಪ ಹಾಗೂ ಬಾಬು ನಡೋಣಿ ಸೇರಿದಂತೆ ಎಲ್ಲರನ್ನೂ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದರು. ಪೊಲೀಸರು ಅಣ್ಣಪ್ಪರನ್ನು ಇಡೀ ದಿನ ಠಾಣೆಯಲ್ಲಿರಿಸಿಕೊಂಡು ಕಿರುಕುಳ ನೀಡಿದ್ದಾರೆ ಆರೋಪಿಸಲಾಗಿದೆ. ಸಂಜೆ ಆಗುತ್ತಿದ್ದಂತೆ ಶುಗರ್ ಕಡಿಮೆಯಾಗಿ, ಬಿಪಿ ಹೆಚ್ಚಾಗಿ ಅಣ್ಣಪ್ಪ ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ, ಅಣ್ಣಪ್ಪರ ಎರಡನೇ ಪುತ್ರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ