Breaking News

45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೆಎಸ್​​ಆರ್​ಟಿಸಿ ಬಸ್ ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡು, ಬಸ್​ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

Spread the love

ಚಾಮರಾಜನಗರ: ಚಾಲಕ ಮೂರ್ಛೆ ಬಿದ್ದು ನಿಯಂತ್ರಣ ತಪ್ಪಿದ KSRTC ಬಸ್​ ಮರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಇಂದು ನಡೆಯಿತು.

ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್​​ ಇದಾಗಿದ್ದು, ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡಿದೆ. ಪರಿಣಾಮ, ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮುಂಭಾಗದಲ್ಲಿ ಕುಳಿತಿದ್ದ ಐವರು ಗಾಯಗೊಂಡಿದ್ದಾರೆ.

“ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್​ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೇ ಹೋಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಎಡಭಾಗಕ್ಕೆ ಪಲ್ಟಿಯಾಗಿ ಅಪಾರ ಪ್ರಮಾಣದ ಸಾವುನೋವು ಆಗುತ್ತಿತ್ತು” ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರತಿದಿನ ಶಾಲಾ, ಕಾಲೇಜು ವಿದ್ಯಾರ್ಥಿಗಳು ಕೊಳ್ಳೇಗಾಲ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ತೆರಳುತ್ತಾರೆ. ಇಂದು ಭಾನುವಾರ ರಜೆ ಇದ್ದುದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ” ಎಂದು ಸ್ಥಳೀಯರು ಹೇಳಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ