Breaking News

ಸರ್ವೀಸ್ ರಸ್ತೆ ಬಂದ್: ಬೆಂ-ಮೈ ಎಕ್ಸ್​ಪ್ರೆಸ್​​ವೇಯಲ್ಲಿ ಟೋಲ್ ತಪ್ಪಿಸಿಕೊಳ್ಳುವವರಿಗೆ ಶಾಕ್

Spread the love

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಟೋಲ್ ತಪ್ಪಿಸಿಕೊಂಡು ಹೋಗುತ್ತಿರುವ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೊಡ್ಡ ಶಾಕ್ ನೀಡಿದೆ. ಟೋಲ್ ತಪ್ಪಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದೆ.

ಈ ಮೂಲಕ ಟೋಲ್ ಕಟ್ಟಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್‌ಗಳಿಂದ ತಪ್ಪಿಸಿಕೊಳ್ಳಲು ಅನ್ಯ ಮಾರ್ಗಗಳನ್ನು ಬಳಸುವುದು, ಬಳಿಕ ಹೆದ್ದಾರಿಗೆ ಎಂಟ್ರಿ ಕೊಡುವ ವಾಹನ ಚಾಲಕರ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹದ್ದಿನ ಕಣ್ಣಿಟ್ಟಿದೆ. ಅದರಲ್ಲೂ ಬೆಂ-ಮೈ ಎಕ್ಸ್‌ಪ್ರೆಸ್‌ವೇ ಮಾರ್ಗದಲ್ಲಿ ಟೋಲ್ ತಪ್ಪಿಸಿಕೊಂಡು ಓಡಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ ಎನ್ನುವ ದೂರುಗಳು ಹೆಚ್ಚಾಗಿ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಂಡಿದೆ.

ಅದರಲ್ಲೂ, ಮೈಸೂರಿನಿಂದ ಬರುತ್ತಿದ್ದ ವಾಹನ ಸವಾರರು ಬಿಡದಿ ಬಳಿ ಸರ್ವಿಸ್ ರಸ್ತೆ ಪ್ರವೇಶಿಸುವ ಮೂಲಕ ಟೋಲ್ ಗೇಟ್‌ನಿಂದ ತಪ್ಪಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಕಳ್ಳದಾರಿಯನ್ನು ಬಂದ್ ಮಾಡಲಾಗಿದೆ. ಬಹಳ ದಿನಗಳಿಂದಲೂ ಈ ಕಳ್ಳಾಟ ನಡೆಯುತ್ತಿದ್ದು, ಕೊನೆಗೂ ಬ್ರೇಕ್ ಹಾಕಲಾಗಿದೆ.


Spread the love

About Laxminews 24x7

Check Also

ವಿಮಾನದಲ್ಲಿ ಬಂದು ಕಾಪರ್ ವೈರ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರು ಯಶವಂತಪುರ ಪೊಲೀಸರಿಂದ ಖತರ್ನಾಕ್ ಖದೀಮರ ಬಂಧನ

Spread the loveಮಾಡೋದು ಕಾಪರ್ ಕಳ್ಳತನ ಆದ್ರೆ ಓಡಾಟ ಮಾತ್ರ ವಿಮಾನದಲ್ಲಿ… ಕಳ್ಳತನ ಮಾಡಲು ಯೂನಿಫಾರ್ಮ್ ಹೋಲಿಸಿಕೊಂಡಿದ್ದ ಆರೋಪಿಗಳು ವಿಮಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ