Breaking News

ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

Spread the love

ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್​​ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್​​ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ. ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಪಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ತಡರಾತ್ರಿ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ‌‌. ಬಳಿಕ, ಎನ್​​ಡಿಪಿಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್​ನ್ನು ಕದ್ದೊಯ್ದಿದ್ದರು.

ಬೆಳಗ್ಗೆ ಠಾಣೆಗೆ ಬಂದ ಪೊಲೀಸರು ಗೇಟ್​​ನ ಬೀಗ ಇಲ್ಲದಿರುವುದನ್ನು ಕಂಡು ಸಿಸಿಟಿವಿ ಪರಿಶೀಲಿಸಿದಾಗ ಕಳ್ಳರು ಬೈಕ್ ಕದ್ದೊಯ್ದಿರುವುದು ಗೊತ್ತಾಗಿದೆ. ಕೂಡಲೇ ಚಾಮರಾಜನಗರ ಪಟ್ಟಣ ಠಾಣೆಗೆ ದೂರು ಕೊಟ್ಟಿದ್ದಾರೆ‌. ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರನ್ನು ಬಂಧಿಸಿ, ಬೈಕ್ ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ