Breaking News

ಚಿತ್ರದುರ್ಗ: ನಿಧಿಯಾಸೆಗೆ ಜ್ಯೋತಿಷಿಯ ಮಾತು ಕೇಳಿ ನರಬಲಿ, ಇಬ್ಬರು ಅರೆಸ್ಟ್

Spread the love

ಚಿತ್ರದುರ್ಗ: ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂಬ ಕಪಟ ಜ್ಯೋತಿಷಿಯ ಮಾತು ಕೇಳಿ ವ್ಯಕ್ತಿಯೊಬ್ಬ, ಚಪ್ಪಲಿ ಹೊಲಿಯುತ್ತಾ ಜೀವನ ನಡೆಸುತ್ತಿದ್ದವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಭಾನುವಾರ ನಡೆದಿದೆ.

ಜೆ.ಜೆ.ಕಾಲೊನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಪೊಲೀಸರು ನರಬಲಿ ಕೊಟ್ಟ ಆರೋಪಿ ಆಂಧ್ರ ಪ್ರದೇಶದ ಆನಂದ್​ ರೆಡ್ಡಿ ಹಾಗೂ ಜ್ಯೋತಿಷಿ ರಾಮಕೃಷ್ಣ ಎಂಬಿಬ್ಬರನ್ನು ಬಂಧಿಸಿದ್ದಾರೆ.

ನಿಧಿಯಾಸೆಗೆ ಚಪ್ಪಲಿ ಹೊಲಿಯುವ ಬಡಪಾಯಿಯ ಕೊಲೆ: ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, “ಪರಶುರಾಂಪುರ ಪೊಲೀಸ್​ ಠಾಣಾ ವ್ಯಪ್ತಿಯಲ್ಲಿ ಫೆ.9ರಂದು ವ್ಯಕ್ತಿಯೋರ್ವನ ಕೊಲೆ ನಡೆದಿದೆ. ಚಪ್ಪಲಿ ಹೊಲಿಯುವ ಕಾಯಕ ಮಾಡುತ್ತಿದ್ದ 52 ವರ್ಷದ ಪ್ರಭಾಕರ್​ ಹತ್ಯೆಯಾಗಿದ್ದರು. ಆರೋಪಿ ಆನಂದ್​ ರೆಡ್ಡಿ ಆಂಧ್ರ ಪ್ರದೇಶದ ಕುಂದುರ್ಪಿ ಮಂಡಲದ ಕದರಾಂಪಲ್ಲಿ ಗ್ರಾಮದವರು. ಇವರು ಪಾವಗಡದ ರೆಸ್ಟೋರೆಂಟ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು” ಎಂದರು.

“ಆನಂದ್​ ರೆಡ್ಡಿಗೆ ಜ್ಯೋತಿಷಿಯೊಬ್ಬರು ಪಶ್ಚಿಮಕ್ಕೆ ಹೋಗಿ ನರಬಲಿ ಕೊಟ್ಟರೆ ಚಿನ್ನ ಸಿಗುತ್ತದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಫೆ.9ರಂದು ಆನಂದ್​ ರೆಡ್ಡಿ ಪರಶುರಾಂಪುರದ ಕಡೆ ಬಂದಿದ್ದರು. ಅಂದು ಸಂಜೆ ಪ್ರಭಾಕರ್​ ಕೆಲಸ ಮುಗಿಸಿ ಮನೆಗೆ ಹೋಗುವಾಗ ಆನಂದ್​ ರೆಡ್ಡಿಗೆ ಸಿಗುತ್ತಾರೆ. ಆಗ ಆನಂದ್​, ಪ್ರಭಾಕರ್​ಗೆ ಲಿಫ್ಟ್​ ಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ಒಂದೆಡೆ ಬೈಕ್​ ನಿಲ್ಲಿಸಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಆ ನಂತರ ಆನಂದ್‌ರನ್ನು ಕೆಲವು ಜನರು ನೋಡಿದ್ದರಿಂದ ಬೈಕ್​ ನಿಲ್ಲಿಸಿ ಪರಾರಿಯಾಗಿ ತಲೆಮರೆಸಿಕೊಂಡಿದ್ದರು” ಎಂದು ಘಟನೆಯನ್ನು ವಿವರಿಸಿದರು.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ