ಮೈಸೂರು : ಸಚಿವ ಕೆ ಎನ್ ರಾಜಣ್ಣ ದೊಡ್ಡವರು. ಅವರ ಬಗ್ಗೆ ನಾನು ಮಾತನಾಡಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಸಣ್ಣ ಕಾರ್ಯಕರ್ತ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾರ್ಮಿಕವಾಗಿ ಹೇಳಿದರು.
ಸಚಿವ ಕೆ.ಎನ್.ರಾಜಣ್ಣ ಅವರ ದಿಢೀರ್ ದೆಹಲಿ ಪ್ರವಾಸ, ಉದಯಗಿರಿ ಗಲಾಟೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಅವರ ಹೇಳಿಕೆಗೆ ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ, ರಾಜಣ್ಣ ದೊಡ್ಡವರು, ನಾನು ಅವರ ಬಗ್ಗೆ ಮಾತನಾಡಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನೊಬ್ಬ ಸಣ್ಣ ಕಾರ್ಯಕರ್ತ ಅಷ್ಟೇ. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ವಿಚಾರದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಈ ಬಗ್ಗೆ ನೋಡಿಕೊಳ್ಳುತ್ತಾರೆ . ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.