Breaking News

ಬೆಳಗಾವಿಯಲ್ಲಿ “ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025 ಪೂರ್ವಭಾವಿ ಸಭೆ

Spread the love

 ಬೆಳಗಾವಿ: “ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025” ರ ಕುರಿತು ಮಾನ್ಯ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ ರವರ ಘನ ಉಪಸ್ಥಿತಿಯಲ್ಲಿ ಇಂದು ಅಪರಾಹ್ನ ಬೆಳಗಾವಿ ಜಿಲ್ಲೆಯ ಬೆಳವಡಿಯಲ್ಲಿರುವ ರಾಣಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಬೆಳವಡಿ ಮಲ್ಲಮ್ಮನ ಉತ್ಸವ ಆಚರಣೆ ನಿಮಿತ್ತ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಶ್ರೀ ಮೊಹಮ್ಮದ ರೋಷನ್ ರವರ ಅಧ್ಯಕ್ಷತೆಯಲ್ಲಿ ಜರುಗಿಸಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಭೀಮಾಶಂಕರ ಗುಳೇದ, ಬೆಳಗಾವಿ ಜಿಲ್ಲಾ ಪಂಚಾಯತ ಸಿ.ಇ.ಒ. ಶ್ರೀ ರಾಹುಲ್ ಶಿಂಧೆ, ಬೈಲಹೊಂಗಲ ಉಪವಿಭಾಗದ ಎ.ಸಿ., ಶ್ರೀಮತಿ ಪ್ರಭಾವತಿ ಫಕೀರಪೂರ, ಬೈಲಹೊಂಗಲ ತಹಶೀಲ್ದಾರ ಹಾಗೂ ಇತರೆ ಇಲಾಖಾ ಅಧಿಕಾರಿಗಳು ಹಾಜರಿದ್ದರು. ಉತ್ಸವನ್ನು ಅತ್ಯಂತ ವಿಜೃಂಭಣೆಯಾಗಿ ಆಚರಿಸಲು ಎಲ್ಲಾ ಅಗತ್ಯ ಏರ್ಪಾಟುಗಳನ್ನು ಮಾಡಿಕೊಳ್ಳಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.


Spread the love

About Laxminews 24x7

Check Also

ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣ, ಏಟ್ರಿಯಾ ವಿಶ್ವವಿದ್ಯಾಲಯ ಕುಲಾಧಿಪತಿ ಸಿ.ಎಸ್. ಸುಂದರರಾಜು, ಪದ್ಮಶ್ರೀ ಪುರಸ್ಕೃತ ಪ್ರಶಾಂತ ಪ್ರಕಾಶ

Spread the loveಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ