ಖಾನಾಪೂರ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಹಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಸತ್ಕರಿಸಿ ಆರ್ಶಿವಾದ ಪಡೆದುಕೊಂಡು ಅಭಿವೃದ್ಧಿಗೆ ಸಹಕರಿಸಲು ಕೋರಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಬೈಲೂರಕರ, ಅಪ್ಪಯ್ಯ ಕೊಡೋಳ್ಳಿ,ಮಜಹರ್ ಖಾನಾಪೂರಿ, ರಫೀಕ್ ವಾರಿಮನಿ ಸೇರಿದಂತೆ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.
