ಕಲಬುರಗಿ, ಫೆಬ್ರವರಿ 14: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರು ಗ್ರಾಮದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಡಿಸೆಲ್ ಟ್ಯಾಂಕರ್ ಅಂಗಡಿಯೊಂದಕ್ಕೆ ನುಗ್ಗಿದೆ.
ಟ್ಯಾಂಕರ್ನ ಹ್ಯಾಂಡ್ಬ್ರೇಕ್ ಹಾಕದೇ ನಿಲ್ಲಿಸಿದ್ದ ಚಾಲಕ ಕಿರಾಣಿ ಅಂಗಡಿಗೆ ಹೋಗಿದ್ದ. ಈ ವೇಳೆ ಡ್ರೈವರ್ ಹಿಂದೆಯೇ ಡೀಸೆಲ್ ಟ್ಯಾಂಕರ್ ಕಿರಾಣ ಅಂಗಡಿಗೆ ನುಗ್ಗಿದೆ.
ವಿಜಪ್ಪಗೌಡ ಎಂಬವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಕಿರಾಣ ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7