Breaking News

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆಯಿತು ಕಾಲ್ತುಳಿತ 18 ಮಂದಿಯ ಸಾವು.

Spread the love

ನವದೆಹಲಿ: ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವರೆಗೆ 18 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಗ್‌ರಾಜ್‌ಗೆ ತೆರಳುವ ರೈಲು ತಡವಾಗಿ ಬಂದಿದ್ದರಿಂದ  ಏಕಾಏಕಿ ಜನರು ರೈಲು ಹತ್ತಲು ಹೋಗಿ ಆಗ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ. ಫ್ಲಾಟ್‌ಫಾರ್ಮ್‌ ನಂಬರ್‌ 14 ಮತ್ತು 15ರಲ್ಲಿ ಈ ದುರಂತ ಸಂಭವಿಸಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 

ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.


Spread the love

About Laxminews 24x7

Check Also

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the loveಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ