Breaking News
Home / Uncategorized / ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ

ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ

Spread the love

ಬೆಂಗಳೂರು : ಕೆಎಸ್ಆರ್ ಟಿಸಿ, ಬಿಎಂಟಿಸಿ ನೌಕರರಿಗೆ ಡಿಸೆಂಬರ್ ತಿಂಗಳ ಸಂಬಳವನ್ನು 10 ದಿನದೊಳಗೆ ನೀಡುತ್ತೇವೆ ಎಂದು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಲಕ್ಷ್ಮಣ ಸವದಿ ನವೆಂಬರ್ ತಿಂಗಳ ತನಕ ಎಲ್ಲಾ ನೌಕರರಿಗೆ ಸಂಬಳ ನೀಡಲಾಗಿದೆ. ಡಿಸೆಂಬರ್ ತಿಂಗಳ ಸಂಬಳವನ್ನು 8 ರಿಂದ 10 ದಿನದೊಳಗೆ ನೀಡಲಾಗುವುದು ಎಂದು ಹೇಳಿದ್ದಾರೆ.

ಇನ್ನು ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಮಾಡುವಂತೆ ಶಾಸಕ ಜಿ.ಟಿ. ದೇವೇಗೌಡ ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ. ಈಗಿರುವ ಆರ್ಥಿಕ ಪರಿಸ್ಥಿತಿಯಲ್ಲಿ ಅವರ ಬೇಡಿಕೆ ಈಡೇರಿಸಲು ಕಷ್ಟವಾಗಲಿದೆ ಎಂದರು.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ