Breaking News

ತಾಯಿ, ಹೆಂಡತಿ,ಮಗನಿಗೆ ವಿಷಕೊಟ್ಟು ಕೊನೆಗೆ ತಾನು ನೇಣಿಗೆ ಶರಾಣಾದ ವ್ಯಕ್ತಿ.

Spread the love

ಮೈಸೂರ: ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕೊಲೆ ಹಾಗೂ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ತಾಯಿ, ಪತ್ನಿ ಹಾಗೂ ಮಗನಿಗೆ ವಿಷವುಣಿಸಿದ ಗಂಡಸು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್​ಪೆಕ್ಟರ್​ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್ – ಬಸ್‌ಪಾಸ್ ಶುಲ್ಕ ಮರುಪಾವತಿ; ಜೂ.29 ರಿಂದ ಅರ್ಜಿ ಪ್ರಕ್ರಿಯೆ ಶುರು

Spread the loveವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ