Breaking News

ನಿಪ್ಪಾಣಿ ನಗರಸಭೆಯಲ್ಲಿ ಪತ್ರಕರ್ತರನ್ನು ಹೊರಗಿಟ್ಟುಸಾಮಾನ್ಯ ಸಭೆ: ಪತ್ರಕರ್ತರ ಧರಣಿ

Spread the love

ಬೆಳಗಾವಿ : ಪತ್ರಕರ್ತರನ್ನು ಹೊರಗಿಟ್ಟು ಸಾಮಾನ್ಯ ಸಭೆ ನಡೆಸುತ್ತಿರುವುದನ್ನು ಖಂಡಿಸಿ ಪತ್ರಕರ್ತರು ನಗರಸಭೆಯ ಹೊರಗೆ ಬುಧವಾರ ಧರಣಿ ನಡೆಸಿದರು.

ನಗರಸಭೆಯಲ್ಲಿ ಸಾಮಾನ್ಯ ಸಭೆ ನಡೆಸಿದ್ದರು. ಈ ವೇಳೆ ಪ್ರತ್ರಕರ್ತರನ್ನು ಹೊರಗಿಟ್ಟು ಸಭೆ ನಡೆಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಪತ್ರಕರ್ತರು ನಗರಸಭೆ ಎದುರು ಧರಣಿ ನಡೆಸಿ, ಧಿಕ್ಕಾರ ಕೂಗಿದ್ದಾರೆ.

ಲೋಕಸಭೆ, ವಿಧಾನಸಭೆ ಅಧಿವೇಶನದಲ್ಲಿಯೂ ಪತ್ರಕರ್ತರಿಗೆ ವರದಿ ಮಾಡಲು ಅವಕಾಶ ಇರುತ್ತದೆ. ಹಾಗಾದರೆ  ನಿಪ್ಪಾಣಿ ನಗರಸಭೆಯಲ್ಲಿ ಏಕಿಲ್ಲ. ನಗರಸಭೆ ಅಸ್ತಿತ್ವಕ್ಕೆ ಬಂದಾಗಿನಿಂದ ಮೊದಲ ಸಲ ಈ ರೀತಿ ಆಗಿದೆ. ಪತ್ರಕರ್ತರನ್ನು ಹೊರಗಿಡುವ ಮೂಲಕ ರಹಸ್ಯವಾಗಿ ವ್ಯವಹಾರ ನಡೆಸುವ ಹುನ್ನಾರ ನಡೆದಿದೆ ಎಂದು ಪತ್ರಕರ್ತರು ಆರೋಪಿಸಿದರು.

ಸಭೆ ಬಳಿಕ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪಕ್ಕದಲ್ಲಿಯೇ ದಾಟಿ ಹೋಗಿರುವ ಪ್ರಸಂಗ ನಡೆದಿದೆ.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ