Breaking News

ಗಂಗಾವತಿ : ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ತೆಲಂಗಾಣದ ವೈದ್ಯೆ –

Spread the love

ಗಂಗಾವತಿ (ಕೊಪ್ಪಳ) : ಸ್ನೇಹಿತರೊಂದಿಗೆ ರಜೆ ಕಳೆಯಲು ಆಗಮಿಸಿದ್ದ ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆವೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ತಾಲೂಕಿನ ಸಣಾಪುರದ ಬಳಿ ಸಂಭವಿಸಿದೆ. ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್​​ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್​ ರಾವ್ ಎಂದು ಗುತಿಸಲಾಗಿದೆ.

ಇವರು ಹೈದರಾಬಾದ್​​ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್​ಹೌಸ್​ಗೆ ಮಂಗಳವಾರ ಸಂಜೆ ಬಂದಿಳಿದಿರುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಈ ಗೆಸ್ಟ್ ಹೌಸ್ ಹಿಂದೆ ಇರುವ ತುಂಗಭದ್ರಾ ನದಿಯಲ್ಲಿ ಈ ಮೂವರು ಈಜಲು ಹೋಗಿದ್ದರು. ಈ ಪೈಕಿ ಅನನ್ಯ, ನದಿಯಲ್ಲಿ ಈಜಲು ಸಮೀಪದ ಬಂಡೆಯೊಂದರ ಮೇಲಿಂದ ನೀರಿಗೆ ಜಿಗಿದಿದ್ದಾರೆ. ನದಿಯಲ್ಲಿನ ನೀರಿನ ಸೆಳೆತದಿಂದ ಕೊಚ್ಚಿ ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ