Breaking News

ಕಲಬುರಗಿಯಲ್ಲಿ ಕಾರ್ಮಿಕನ ಮೃತದೇಹವನ್ನು ಎಳೆದೊಯ್ದ ಘಟನೆ ಸಂಬಂಧ ಎಸ್​ಪಿ ಜೊತೆ ಮಾತನಾಡಿದ್ದೇನೆ. ಕೆಲವು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಸಚಿವ ಸಂತೋಷ್​ ಲಾಡ್ ತಿಳಿಸಿದರು.​

Spread the love

ಧಾರವಾಡ: ಕಾರ್ಮಿಕನ ಮೃತದೇಹವನ್ನು ಎಳೆದೊಯ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯ ಸಿಮೆಂಟ್ ಕಂಪನಿಯೊಂದರಲ್ಲಿ ನಡೆದಿದೆ. ಬಿಹಾರದ ಚಂದನಸಿಂಗ್ (35) ಮೃತ ಕಾರ್ಮಿಕ. ಕಾರ್ಮಿಕನನ್ನು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಆರು ಮಂದಿ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಲಬುರಗಿ ಎಸ್​ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ.

“ಕಾರ್ಮಿಕ ಮೃತಪಟ್ಟಿದ್ದು ಕಾರ್ಖಾನೆಯ ಒಳಗಡೆ ಅಲ್ಲವೇ ಅಲ್ಲ. ಕಾರ್ಮಿಕ ಬಹಿರ್ದೆಸೆಗೆಂದು ಬೆಳಿಗ್ಗೆ ಕಾರ್ಖಾನೆಯಾಚೆಗೆ ಹೋಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ” ಎಂದು ಕಂಪನಿ ಸ್ಪಷ್ಟಪಡಿಸಿದೆ.ಈ ಕುರಿತು ಧಾರವಾಡ ನಗರದಲ್ಲಿ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವ ಸಂತೋಷ್​ ಲಾಡ್, “ಕಲಬುರಗಿಯಲ್ಲಿ ಕಾರ್ಮಿಕನ ಮೃತದೇಹವನ್ನು ಎಳೆದೊಯ್ದ ಕೃತ್ಯ ಅಮಾನವೀಯ. ಮನುಷ್ಯನಿಗೆ ಮನುಷ್ಯತ್ವ ಇಲ್ಲ ಎನ್ನುವಂತಹ ಸಮಾಜ ನಿರ್ಮಾಣ ಮಾಡಿಬಿಟ್ಟಿದ್ದೇವೆ ಎಂದು ಬೇಸರವಾಗುತ್ತಿದೆ. ಕಾರ್ಮಿಕರೇ ಮೃತದೇಹವನ್ನು ಎಳೆದೊಯ್ಯುತ್ತಿರುವ ವಿಡಿಯೋವನ್ನು ನೋಡಿದ್ದೇನೆ. ಈ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಜೊತೆ ಮಾತನಾಡಿದ್ದೇನೆ. ಕೆಲ ಆರೋಪಿಗಳು ಅರೆಸ್ಟ್​ ಆಗಿದ್ದಾರೆ” ಎಂದು ತಿಳಿಸಿದರು.ಫ್ಯಾಕ್ಟರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಈ ಘಟನೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಮೃತದೇಹಕ್ಕೆ ಕನಿಷ್ಠ ಗೌರವ ಕೊಡಬೇಕೋ, ಅದನ್ನು ಕೊಡಲಿಲ್ಲವೆಂದರೆ ಯಾವ ರೀತಿಯ ಸಮಾಜವನ್ನು ಸೃಷ್ಟಿ ಮಾಡಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಹೇಳಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ