Breaking News

ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ: ಸಚಿವ ಮುನಿಯಪ್ಪ

Spread the love

ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದೆಯೇ ಹೈಕಮಾಂಡ್ ಎಸ್‌ಸಿ, ಎಸ್‌ಟಿ ಸಮುದಾಯಗಳನ್ನು ಒಗ್ಗೂಡಿಸಿ ಅಂತ ಹೇಳಿತ್ತು. ಹೈಕಮಾಂಡ್ ಯಾವಾಗ ಸಮಾವೇಶ ಮಾಡಬೇಕೆಂದು ಹೇಳುತ್ತದೋ ಆವಾಗ ಸಮಾವೇಶವನ್ನು ಮಾಡುತ್ತೇವೆ ಎಂದರು.

ನಾನೇನೂ ಹೈಕಮಾಂಡ್ ಭೇಟಿಯಾಗಲ್ಲ. ಸಮಾವೇಶ ಮಾಡಬೇಕು ಅಂತ ರಾಜಣ್ಣ, ಪರಮೇಶ್ವರ್ ಸೇರಿ ಹಲವರು ಮನವಿ ಮಾಡಿದ್ದಾರೆ. ಬೇರೆಯವರು ಹೇಳಿದ್ದನ್ನೇ ನಾನು ಹೋಗಿ ಹೇಳಬೇಕು. ಚಿತ್ರದುರ್ಗದಲ್ಲಿ ಮಾಡಿದ ಐಕ್ಯತಾ ಸಮಾವೇಶ ಪಕ್ಷಕ್ಕೆ ಶಕ್ತಿ ತುಂಬಿದೆ. ಆ ಸಮಾವೇಶದಿಂದ ನಮಗೆ ಹೆಚ್ಚು ಲಾಭ ಆಗಿತ್ತು. ಚಿತ್ರದುರ್ಗದಲ್ಲಿ ಸಮಾವೇಶ ಮಾಡಬೇಕೆಂದು ಹೈಕಮಾಂಡ್ ನಾಯಕರೇ ಹೇಳಿದ್ದರು. ಈಗ ಕೃತಜ್ಞತಾ ಸಮಾವೇಶ ಅಂತಲೋ ಅಥವಾ ಬೇರೆ ಕಾರ್ಯಕ್ರಮ ಮಾಡಬೇಕು. ಹೈಕಮಾಂಡ್​ನಿಂದ ಇದಕ್ಕೆ ವಿರೋಧ ಇಲ್ಲ. ಆದರೆ, ಅವರು ಹೇಳಿದಾಗ ಮಾಡುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ