Breaking News

ರೈತರ ಮನವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಂದನೆ; ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಆದೇಶ

Spread the love

ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ.

ಈ ಕುರಿತು ಧಾರವಾಡ ವಾರ್ತಾ ಇಲಾಖೆ ಮಾಹಿತಿ ನೀಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ಜರುಗಿದ್ದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗಾಗಿ 14.87 ಟಿ.ಎಂ.ಸಿ ಹಾಗೂ ಹಿಂಗಾರು ಹಂಗಾಮಿಗೆ 16 ಟಿ.ಎಂ.ಸಿ ಹೀಗೆ ಒಟ್ಟಾರೆಯಾಗಿ 30.842 ಟಿ.ಎಂ.ಸಿ ನೀರನ್ನು ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒದಗಿಸಲಾಗಿದೆ.

ಅದರಂತೆ ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒಳಪಡುವ ಕಾಲುವೆಗಳ ಮುಖಾಂತರ ಫೆಬ್ರವರಿ 14ರ ವರೆಗೆ 16 ಟಿಎಂಸಿ ನೀರನ್ನು ನೀರಾವರಿ ಉದ್ದೇಶಕ್ಕೆ ರೈತರಿಗೆ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಎರಡೂ ಹಂಗಾಮುಗಳು ಮುಗಿದಿದ್ದರೂ ಸಹ, ನರಗುಂದ ಹಾಗೂ ಬಾದಾಮಿ ಶಾಸಕರು ಹಾಗೂ ರೈತ ಮುಖಂಡರು ನೀರನ್ನು ಕಾಲುವೆಗಳಿಗೆ ಮಾರ್ಚ 15ರವರೆಗೆ ಮುಂದುವರಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ, ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಫೆಬ್ರವರಿ 15ಕ್ಕೆ ಸ್ಥಗಿತಗೊಳಿಸಬೇಕಾಗಿದ್ದ ನೀರನ್ನು ಮಾರ್ಚ್ 1ರ ವರೆಗೆ ನೀರಾವರಿ ಕಾಲುವೆಗಳ ಮುಖಾಂತರ ಹರಿಸುವುದನ್ನು ಮುಂದುವರೆಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಅಲ್ಲದೆ, ಅವಶ್ಯಕ ಕುಡಿಯುವ ನೀರಿಗಾಗಿ ಜೂನ್ ಅಂತ್ಯದವರೆಗೆ 15 ಟಿ.ಎಂ.ಸಿ ನೀರನ್ನು ಕಾಯ್ದಿರಿಸಿ ಒದಗಿಸಲು ಸಚಿವರು ಸೂಚಿಸಿದ್ದಾರೆ.

ಜೊತೆಗೆ, ಮಾರ್ಚ್ 1ರೊಳಗಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕುಡಿಯುವ ನೀರಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಸೂಚಿಸಿದ್ದಾರೆ.


Spread the love

About Laxminews 24x7

Check Also

ಭೂಕುಸಿತವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ್ (

Spread the loveಹಾಸನ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿರುವ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದ ಶ್ರೇಯಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ