Breaking News
Home / ರಾಜ್ಯ / ವಿವಾಹದ ಔತಣಕೂಟ,ಊಟಕ್ಕೆ ಕೂತಾಗ ಊಟದಲ್ಲಿ ಬರೀ ಕಲ್ಲು

ವಿವಾಹದ ಔತಣಕೂಟ,ಊಟಕ್ಕೆ ಕೂತಾಗ ಊಟದಲ್ಲಿ ಬರೀ ಕಲ್ಲು

Spread the love

ಚಿಕ್ಕಮಗಳೂರು: ವಿವಾಹದ ಔತಣಕೂಟದಲ್ಲಿ ಭಾಗವಹಿಸಿದವರ ಹಲ್ಲುಗಳು ಜುಮ್ ಎನ್ನುವಂತಾಗಿದ್ದು, ಉಪ್ಪಿನ ಪಾಕೆಟ್‍ನಲ್ಲಿನ ಭಾರೀ ಪ್ರಮಾಣದ ಕಲ್ಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಬಳಿಯ ಹೆಮ್ಮದಿ ಗ್ರಾಮದಲ್ಲಿ ಮದುವೆ ನಡೆದಿತ್ತು. ಸರದಿ ಸಾಲಲ್ಲಿ ಊಟಕ್ಕೆ ಕೂತವರು ಕಲ್ಲು ಅನ್ನದಲ್ಲೋ, ಮಟನ್‍ನಲ್ಲೋ ಎಂದು ಗೊಂದಲಕ್ಕೀಡಾಗಿದ್ದರು. ಹೆಮ್ಮದಿ ಗ್ರಾಮದ ರತನ್ ಅವರು ಸ್ನೇಹಿತರು ಹಾಗೂ ನವದಂಪತಿಗಳಿಗೆ ಔತಣಕೂಟ ಏರ್ಪಡಿಸಿದ್ದರು. ಆದರೆ ಊಟಕ್ಕೆ ಕೂತಾಗ ಊಟದಲ್ಲಿ ಬರೀ ಕಲ್ಲು ಸಿಕ್ಕಿತ್ತು.

 

ಜನ ಉಪ್ಪಿನ ಬಗ್ಗೆ ಸಂಶಯ ಪಡುವುದಿಲ್ಲ. ಅದನ್ನೇ ಕೆಲವರು ಬಂಡವಾಳ ಮಾಡಿಕೊಂಡಿದ್ದಾರೆ. ಅಕ್ಕಿ, ರಾಗಿ, ಗೋಧಿಯಲ್ಲಿ ಕಲ್ಲು ಬಂದಿದ್ದಾಯಿತು. ಈಗ ಉಪ್ಪಿನಲ್ಲೂ ಕಲ್ಲು ಬರುವ ಕಾಲ ಬಂದಿದೆ. ಜನ ಮನೆಯಲ್ಲಿ ಉಪ್ಪನ್ನ ಬಳಸುವ ಮುನ್ನ ಎಚ್ಚರದಿಂದ ಇರಬೇಕೆಂದು ಘಟನೆಯಿಂದ ನೊಂದ ರತನ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ದೊಡ್ಡವರು ಕಲ್ಲು ಸಿಕ್ಕರೆ ತೆಗೆದು ಹಾಕುತ್ತಾರೆ. ಆದರೆ ಮಕ್ಕಳು ಅವುಗಳನ್ನ ತಿಂದರೆ ಅನಾರೋಗ್ಯ ಗ್ಯಾರಂಟಿ. ಆದ್ದರಿಂದ ಜನ ಮನೆಯಲ್ಲಿ ಉಪ್ಪನ್ನ ಬಳಸುವ ಮುನ್ನ ಎಚ್ಚರದಿಂದಿರಬೇಕೆಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ