ಹುಬ್ಬಳ್ಳಿ, ಫೆಬ್ರವರಿ 26: ಹುಬ್ಬಳ್ಳಿಯ ಗಬ್ಬೂರಿನಲ್ಲಿರುವ ಗೋದಾಮಿನೊಂದರ ಮೇಲೆ ಫೆ. 15ರಂದು ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ, ಬಡ ಮಕ್ಕಳಿಗೆ, ಬಾಣಂತಿಯರಿಗೆ ಮತ್ತು ಗರ್ಭಿಣಿಯರಿಗೆ ವಿತರಣೆ ಮಾಡಬೇಕಾದ ಲಕ್ಷಾಂತರ ರೂ. ಮೌಲ್ಯದ ಪೌಷ್ಟಿಕ ಆಹಾರದ ಪಾಕೇಟ್ಗಳು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿತ್ತು. ಇದೇ ಪ್ರಕರಣದಲ್ಲಿ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸರು 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನರನ್ನು ಬಂಧಿಸಿದ್ದರು. ಆದರೆ, ಪ್ರಕರಣದ ಮುಖ್ಯ ಕಿಂಗ್ಪಿನ್ಗಳು ದಾಳಿ ನಡೆದು 13 ದಿನವಾದರೂ ಇನ್ನೂ ಪತ್ತೆಯಾಗಿಲ್ಲ.
ಕಾಂಗ್ರೆಸ್ ಪ್ರಭಾವಿ ನಾಯಕರ ಬೆಂಬಲದ ಅನುಮಾನ
ಪ್ರಕರಣದ ಪ್ರಮುಖ ರೂವಾರಿಗಳಿಗೆ ಕಾಂಗ್ರೆಸ್ನ ಪ್ರಭಾವಿ ನಾಯಕರ ಬೆಂಬಲ ಇದೆ ಎಂಬ ಅನುಮಾನ ಹುಟ್ಟಿದೆ. ಪ್ರಮುಖ ಆರೋಪಿಗಳಾದ ಬೈತೂಲ್ಲಾ ಕಿಲ್ಲೇದಾರ ಹಾಗೂ ಪತಿ ಫಾರೂಕ್ ಮಕ್ಕಳ ಅನ್ನಕ್ಕೆ ಕನ್ನ ಹಾಕಿ ರಾಜ್ಯ ರಾಜ್ಯ ಸುತ್ತುತ್ತಿದ್ದಾರೆ. ಇವರ ಪತ್ತೆಗೆ ಪೊಲೀಸರು ನಾಲ್ಕು ತಂಡ ಮಾಡಿ ಗೋವಾ ಮಹಾರಾಷ್ಟ್ರ ಸುತ್ತಿದ್ದಾರೆ.
ಅಜ್ಮೀರ್ ದರ್ಗಾದತ್ತ ಪೊಲೀಸರ ದೌಡು
ಕಳೆದ 13 ದಿನಗಳಿಂದ ನಾಪತ್ತೆಯಾಗಿರುವ ಕೈ ನಾಯಕಿ ಬೈತೂಲ್ಲಾ ಕಿಲ್ಲೇದಾರ ಹಾಗೂ ಫಾರುಕ್ ದರ್ಗಾಗೆ ಹೋಗಿದ್ದಾರೆಂಬ ಮಾಹಿತಿ ಮೇಲೆ ಅಜ್ಮೀರ್ ದರ್ಗಾದತ್ತ ಪೊಲೀಸರು ಹೊರಟಿದ್ದಾರೆ. ಪ್ರಮುಖ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಕಲಾದಗಿ, ಸಲೀಂ ಬೇಪಾರಿ, ಸಲೀಂ ಶೇಖ್, ಸಲೀಂ ಅತ್ತಾರ, ದಾಪೀರ್ ಚೌಧರಿ ಮತ್ತು ಬಸವರಾಜ ವಾಲ್ಮೀಕಿ ಎನ್ನುವ ಯುವಕರನ್ನು ಪೊಲೀಸರು ಕಂಬಿ ಹಿಂದೆ ಕಳಿಸಿದ್ದಾರೆ. ಇದಲ್ಲದೆ ಮತ್ತೆ ಎರಡು ಪ್ರಕರಣ ದಾಖಲಾಗಿವೆ. ಪ್ರಮುಖ ಆರೋಪಿ ಬೈತೂಲ್ಲಾ ಕಿಲ್ಲೇದಾರ ಮೇಲೆ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
Laxmi News 24×7