ಬೆಂಗಳೂರು, ಮಾರ್ಚ್ 03 : ರಾಜ್ಯ ಕಲಾವಿದರ ಸಂಘಕ್ಕೆ ನಾಯಕತ್ವದ ಕೊರತೆ ಇದೆ, ಹಿರಿಯ ನಟ ಜಗ್ಗೇಶ್ (Jaggesh) ಅವರನ್ನು ಹೇಳಿದ್ದು ಸರಿ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಹೇಳಿದರು.
ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ಚಿತ್ರರಂಗವಾಗಲೀ, ಕಲಾವಿದರ ಸಂಘವನ್ನಾಗಲೀ ಮುನ್ನಡೆಸುವವರು ಯಾರಾದರೂ ಇದ್ದಾರೆಯೇ? ಅದೊಂದು ಕಾಲವಿತ್ತು, ಡಾ ರಾಜ್ ಕುಮಾರ್ ಅವರು ಕರೆ ನೀಡಿದರೆ ಲಕ್ಷಾಂತರ ಜನ ಸೇರುತ್ತಿದ್ದರು,
ಅಂಬರೀಶ್, ವಿಷ್ಣುವರ್ಧನ ಈಗ ನಮ್ಮೊಂದಿಗಿಲ್ಲ, ಅವರಂಥ ನಾಯಕತ್ವ ಯಾರು ನೀಡುತ್ತಾರೆ? ಮನೆಯಲ್ಲಿ ಕೂತೂ ಹೇಳುವವರು ಬಹಳ ಜನ ಸಿಕ್ಕಾರು, ಆದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವ ಯುವಕರ ಅವಶ್ಯಕತೆ ನಮಗಿದೆ ಎಂದು ಸಾಧು ಕೋಕಿಲ ಹೇಳಿದರು.
Laxmi News 24×7