ಬೆಂಗಳೂರು, ಮಾರ್ಚ್ 06: ಹೋಟೆಲ್ನಲ್ಲಿ ಮಚ್ಚು ಹಿಡಿದು ಅಡಿಗೆ ಭಟ್ಟನನ್ನ ಮ್ಯಾನೇಜರ್ (manager) ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ
(Attack) ಮಾಡಿರುವಂತಹ ಘಟನೆ ಆರ್ಟಿ ನಗರದ 80 ಅಡಿ ರಸ್ತೆಯಲ್ಲಿನ ಹೋಟೆಲ್ ಒಂದರಲ್ಲಿ ನಡೆದಿದೆ. ಮಟನ್ ಕಡಿಯುವ ಮಚ್ಚಿನಿಂದ ಸಿಬ್ಬಂದಿ ಅಡುಗೆ ಭಟ್ಟನ ಗುರುಮೂರ್ತಿ ಮೇಲೆ ಮ್ಯಾನೇಜರ್ ಶಜಾದ್ ಅಲಿ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ.
ಸದ್ಯ ಘಟನೆ ಬಗ್ಗೆ ಪೊಲೀಸರು (police) ಮಾಹಿತಿ ಪಡೆದುಕೊಂಡಿದ್ದಾರೆ. ಹುಡುಗಿ ವಿಚಾರಕ್ಕೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರ್ಟಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಆರ್ಟಿ ನಗರ ಪೊಲೀಸರು ಭೇಟಿ ನೀಡಿದ್ದಾರೆ. ಹೋಟೆಲ್ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮಾಡಿದ್ದಾರೆ. ಮಧ್ಯಾಹ್ನ 1.30 ರ ನಡುವೆ ಘಟನೆ ನಡೆದ್ದು, ಈ ವೇಳೆ ಮಾಂಸ ಕತ್ತರಿಸುವ ಮಚ್ಚು ತಂದು ಹಲ್ಲೆ ಮಾಡಲಾಗಿದೆ. ಗಾಯಾಳು ಗುರುಮೂರ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Laxmi News 24×7