Breaking News

ಎಲ್ಲಾ ವಲಯಗಳಿಗೆ ನ್ಯಾಯ ದೊರಕುವ ಜನಪರ ಬಜೆಟ್

Spread the love

ಎಲ್ಲಾ ವಲಯಗಳಿಗೆ ನ್ಯಾಯ ದೊರಕುವ ಜನಪರ ಬಜೆಟ್
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಲ್ಲ ವಲಯಗಳನ್ನು ಒಗ್ಗೂಡಿಸಿ, ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಜನಪರ ಬಜೆಟ್ ಮಂಡಿಸಿದ್ದಾರೆ.
ಉಚಿತ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಮೀಸಲಾಗಿರುವುದರಿಂದ, ಉಳಿದ ಭಾಗದಲ್ಲಿ ಸಮತೋಲನ ಕಾಯ್ದುಕೊಂಡು ಎಲ್ಲ ವರ್ಗಗಳಿಗೂ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ.
ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಒಳಗೊಂಡ ಬೆಳಗಾವಿ ಜಿಲ್ಲೆಯ ಅಭಿವೃದ್ದಿಗೆ ವಿಶೇಷ ಒತ್ತು:
✅ ನೀರಾವರಿ ಮತ್ತು ಜಲ ಸಂರಕ್ಷಣೆ ಯೋಜನೆಗಳಿಗೆ ವಿಶೇಷ ಅನುದಾನ
✅ ₹1,200 ಕೋಟಿ ವೆಚ್ಚದಲ್ಲಿ ಎಕ್ಸ್ಪ್ರೆಸ್‌ವೇ ನಿರ್ಮಾಣ
✅ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಅಥಣಿ ತಾಲೂಕಿಗೆ ನೂತನ ಕೃಷಿ ಕಾಲೇಜು ಅನುಮೋದನೆ
✅ ಸವದತ್ತಿಯ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ₹199 ಕೋಟಿ ಅನುದಾನ
2025-26 ರ ಬಜೆಟ್ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಸಮತೋಲನಮಯ ಮತ್ತು ಜನಪರ ಬಜೆಟ್ ಇದಾಗಿದೆ. ಈ‌ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ 16 ನೆಯ ಬಜೆಟ್ ಮಂಡಿಸಿ ವಿಶೇಷ ದಾಖಲೆ ಸೃಷ್ಟಿಸಿದ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ