ಬೆಂಗಳೂರು, (ಮಾರ್ಚ್ 07): ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಆನಂದ್ ಸಿಂಗ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇಂದು (ಮಾರ್ಚ್ 07) ಆರೋಪಿಗಳಾದ ಆನಂದ್ ಸಿಂಗ್ ಹಾಗೂ ಗೋವಾ ಮಾಜಿ ಸಚಿವ ರೋಹನ್ ಕೌಂಟೆ ಸೇರಿದಂತೆ 16 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಆನಂದ್ ಸಿಂಗ್, ಗೋವಾ ಸಚಿವ ರೋಹನ್ ಕೌಂಟೆ ಆರೋಪಿಯಾಗಿದ್ದರು. ಈ ಪ್ರಕರಣ ವಾದ ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದಿಗೆ ತೀರ್ಪು ಕಾಯ್ದಿರಿಸಿತ್ತು.
ಅದರಂತೆ ಇಂದು ಜನಪ್ರತಿನಿಧಿಗಳ ಕೋರ್ಟ್, ತೀರ್ಪು ಪ್ರಕಟಿಸಿದ್ದು, ಆನಂದ್ ಸಿಂಗ್ ಕೇಸ್ನಿಂದ ಖುಲಾಸೆಗೊಂಡಿದ್ದಾರೆ.
Laxmi News 24×7