ಹುಬ್ಬಳ್ಳಿ, ಮಾರ್ಚ್ 09: ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi),
ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ನೇಮಕಾತಿಗೆ ಹರಾಜು ನಡೆಯುತ್ತಿದೆ.
ಕಾನೂನು ಸುವ್ಯವಸ್ಥೆಗಿಂತ ಹರಾಜಿನಲ್ಲಿ ಕೊಟ್ಟ ಹಣದ ಬಗ್ಗೆ ಚಿಂತೆ ಇರುತ್ತೆ. ಸಿಎಂ ಕೇವಲ ಟ್ವೀಟ್ ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ.
Laxmi News 24×7