Breaking News

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

Spread the love

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*
*ಬೆಂಗಳೂರು-* ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ.
ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ ತಂಡವಾಗಿದೆ.
ಭಾನುವಾರದಂದು ದುಬೈ ಕ್ರೀಡಾಂಗಣದಲ್ಲಿ ಜರುಗಿದ ಕಿವಿಸ್ ಎದುರು ಫೈನಲ್ ಫೈಟ್ ನಲ್ಲಿ ಕೊನೆಗೂ ಕಿವೀಸ್ ವಿರುದ್ಧ ಗೆಲ್ಲುವ ಮೂಲಕ ಭಾರತ ಚಾಂಪಿಯನ್ ಪಟ್ಟಕ್ಕೇರಿತು. ಈ ಮೂಲಕ ಕಳೆದ ೨೫ ವರ್ಷಗಳ ಹಿಂದಿನ ಸೇಡು ತೀರಿಸಿಕೊಂಡಿದೆ.
ಅಲ್ಲದೇ ಈ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತವು ಒಂದೂ ಪಂದ್ಯವನ್ನು ಸೋಲದೇ ಅಜೇಯವಾಗಿ ಫೈನಲ್ ಪ್ರವೇಶ ಮಾಡಿ ಕಿವೀಸ್ ವಿರುದ್ಧ ೪ ವಿಕೆಟ್ ಗೆಲುವು ಪಡೆದುಕೊಂಡಿತು.
ಟೀಂ ಇಂಡಿಯಾ ಹೊಸ ಚಾಂಪಿಯನ್ ಆಗುತ್ತಿದ್ದಂತೆಯೇ ದೇಶಾದ್ಯಂತ ಸಂಭ್ರಮ ಮುಗಿಲು ಮುಟ್ಟಿದೆ.
ಪಟಾಕಿ ಸಿಡಿಸಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

Spread the love

About Laxminews 24x7

Check Also

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ