ಬೆಂಗಳೂರು, ಮಾರ್ಚ್ 12: 2013ರ ಹಲ್ಲೆ ಅಟ್ರಾಸಿಟಿ ಕೇಸ್ಗೆ ಸಂಬಂಧಿಸಿದಂತೆ ರಾಬರ್ಟ್ಸನ್ ಪೇಟೆ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ಸಚಿವ ಕೆ.ಹೆಚ್.ಮುನಿಯಪ್ಪಗೆ (KH Muniyappa) ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು.
ಹಾಗಾಗಿ ಇಂದು ಕೋರ್ಟ್ಗೆ ಹಾಜರಾಗಬೇಕಿತ್ತು. ಗೈರಾಗಿದ್ದಕ್ಕೆ ಇತ್ತ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಖುದ್ದು ಹಾಜರಾಗದಿದ್ದರೆ ಅರೆಸ್ಟ್ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್ಗೆ
ಸಚಿವ ಮುನಿಯಪ್ಪ ಓಡೋಡಿ ಬಂದಿದ್ದು, ಇದೀಗ ಜಾಮೀನು (Bail) ಮಂಜೂರು ಮಾಡಲಾಗಿದೆ.2013ರ ಹಲ್ಲೆ ಅಟ್ರಾಸಿಟಿ ಕೇಸ್ಗೆ ಸಂಬಂಧಿಸಿದಂತೆ ಸದ್ಯ ಜನಪ್ರತಿನಿಧಿಗಳ ಕೋರ್ಟ್ನಿಂದ ಕೆ.ಹೆಚ್.ಮುನಿಯಪ್ಪ ಹಾಗೂ ಲಕ್ಷ್ಮೀ ನಾರಾಯಣ್ಗೆ ಜಾಮೀನು ಮಂಜೂರು ಮಾಡಲಾಗಿದೆ. ಕೋರ್ಟ್ಗೆ ಕೆ.ಹೆಚ್.ಮುನಿಯಪ್ಪ 50 ಸಾವಿರ ರೂ. ಬಾಂಡ್ ನೀಡಬೇಕಿದೆ.
Laxmi News 24×7