ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆ: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ಆಲಿಕಲ್ಲು ಮಳೆ ಸುರಿದಿದೆ. ಉಜಿರೆ, ಕಕ್ಕಿಂಜೆ, ಚಾರ್ಮಾಡಿ ಭಾಗದಲ್ಲಿ ಸುರಿದ ಮಳೆಯಲ್ಲಿ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಬಿದ್ದಿದೆ.
ವಿಮಾನಗಳು ಡೈವರ್ಟ್: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಕಳೆದ ರಾತ್ರಿ ಇಳಿಯಬೇಕಿದ್ದ ಮೂರು ವಿಮಾನಗಳನ್ನು ಕೇರಳಕ್ಕೆ ಡೈವರ್ಟ್ ಮಾಡಲಾಗಿತ್ತು. ಹೈದರಾಬಾದ್ನ ಒಂದು ವಿಮಾನ ಮತ್ತು ಬೆಂಗಳೂರಿನ ಎರಡು ವಿಮಾನಗಳನ್ನು ಕೇರಳದ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ವಾತಾವರಣ ಸರಿಯಾದ ಬಳಿಕ ಮತ್ತೆ ಈ ವಿಮಾನಗಳು ಮಂಗಳೂರು ವಿಮಾನ ನಿಲ್ದಾಣ ತಲುಪಿವೆ.
Laxmi News 24×7