Breaking News

ಕಾಲು ಜಾರಿ ಬಾವಿಯೊಳಗೆ ಬಿದ್ದು ಬಾಲಕ ಸಾವು, ರಕ್ಷಿಸಲು ಹೋದ ಅಜ್ಜಿಯೂ ನೀರು ಪಾಲು

Spread the love

ವಿಜಯಪುರ : ನೀರು ಕುಡಿಯಲು ಬಾವಿಗೆ ಇಳಿದಿದ್ದ ಬಾಲಕ ಕಾಲು ಜಾರಿ ಮುಳುಗಿದ್ದು, ಬಾಲಕನ ರಕ್ಷಿಸಲು ಹೋದ ಆತನ ಅಜ್ಜಿಯೂ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ನಡೆದಿದೆ.

ಅಸಾದ್‌ ಮುಲ್ಲಾ (12) ಮೃತ ಬಾಲಕ, ಸಲೀಮಾ‌ ಮುಲ್ಲಾ (55) ಮೃತ ಅಜ್ಜಿ‌ ಎಂಬುದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಹೊರ್ತಿ ಪೊಲೀಸರು ಬಾವಿಯೊಳಗಿದ್ದ ಇಬ್ಬರ ಶವವನ್ನ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆಯ ಬಗ್ಗೆ ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ, ಕ್ಯಾಬಿನೆಟ್ ನಿರ್ಧಾರ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಗುತ್ತಿಗೆ ಅವ್ಯವಹಾರದ ತನಿಖಾ ವರದಿ;* ಕ್ರಮದ ಬಗ್ಗೆ ಸಿಎಂ, ಕ್ಯಾಬಿನೆಟ್ ನಿರ್ಧಾರ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ